ಮಂಗಳೂರು: ಪತ್ರ ಬರೆದಿಟ್ಟು ಹೊಟೇಲ್ ಮ್ಯಾನೇಜ್‌ಮೆಂಟ್ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಮಂಗಳೂರು: ಪ್ರಾಧ್ಯಾಪಕರೊಬ್ಬರಿಂದ ಮಾನಸಿಕ ಕಿರಿಕಿರಿಯಾಗುತ್ತಿದೆ ಎಂದು ಡೆತ್ ನೋಟ್ ಬರೆದಿಟ್ಟು ನಗರದ ಕರಾವಳಿ ಕಾಲೇಜಿನ ಹೊಟೇಲ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆಯೊಂದು ನಡೆದಿದೆ.

ಮೂಲತಃ ಬೆಂಗಳೂರು ನಗರದ ಕುಮಾರಸ್ವಾಮಿ ಬಡಾವಣೆ ನಿವಾಸಿ, ನಗರದ ಕರಾವಳಿ ಕಾಲೇಜಿನ ಹೊಟೇಲ್ ಮ್ಯಾನೇಜ್‌ಮೆಂಟ್‌ ಕಾಲೇಜು ವಿದ್ಯಾರ್ಥಿ ಭರತ್(20) ಆತ್ಮಹತ್ಯೆ ಮಾಡಿಕೊಂಡಿರುವಾತ.

ಆತ್ಮಹತ್ಯೆ ಮಾಡಿಕೊಂಡಿರುವ ಭರತ್ ತಾನು ವಾಸವಾಗಿದ್ದ ಪಿಜಿಯಲ್ಲಿಯೇ ನಿನ್ನೆ ಮಧ್ಯಾಹ್ನ ಹೊತ್ತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕಿಂತ ಮೊದಲು ತನ್ನ ತಾಯಿಗೆ ಕರೆ ಮಾಡಿದ್ದಾನೆ. ಆದರೆ ಅವರಿಗೆ ಆ ಕ್ಷಣಕ್ಕೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.‌ ಇದರಿಂದ ಭರತ್ ಅವರ ವಾಟ್ಸ್ಆ್ಯಪ್ ನಂಬರ್ ಗೆ ಮೆಸೇಜ್ ಮಾಡಿದ್ದಾರೆ‌. ಅದರಲ್ಲಿ ''ಕಾಲೇಜಿನ‌ ಪ್ರಾಧ್ಯಾಪಕರೊಬ್ಬರು ತಾನು ಮಾಡಿರುವ ಪ್ರಾಜೆಕ್ಟ್ ವರ್ಕ್ ಸರಿಯಿಲ್ಲವೆಂದು ಸಹಿ ಮಾಡದೆ ಕಿರಿ ಕಿರಿ ಮಾಡುತ್ತಿದ್ದಾರೆ. ಅಲ್ಲದೆ ಮನಸ್ಸಿಗೆ ನೋವಾಗುವಂತೆ ವರ್ತಿಸುತ್ತಿದ್ದಾರೆ‌. ಇದೀಗ ತನ್ನನ್ನು ಪರೀಕ್ಷೆಗೆ ಕುಳಿತುಕೊಳ್ಳಲು ಬಿಡುವುದಿಲ್ಲ ಎನ್ನುವ ರೀತಿ ಮಾತನಾಡುತ್ತಿದ್ದಾರೆ. ಆದ್ದರಿಂದ ತಾನು ಈ ಲೋಕವನ್ನು ತ್ಯಜಿಸುತ್ತಿದ್ದೇನೆ'' ಸಂದೇಶ ರವಾನಿಸಿದ್ದಾನೆ. ಆ ಬಳಿಕ‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂಜೆ ವೇಳೆಗೆ ಆತ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಬಂದಿದೆ.


ಬೆಂಗಳೂರಿನಿಂದ ಇಂದು ಬೆಳಗ್ಗೆ ಆತನ ಹೆತ್ತವರು ಮಂಗಳೂರಿಗೆ ಆಗಮಿಸಿದ್ದಾರೆ. ಅವರು ಇದೀಗ ತಮ್ಮ ಸಾವಿಗೆ ಕಾರಣನಾದ ಪ್ರಾಧ್ಯಾಪಕ ಹಾಗೂ ಕಾಲೇಜು ಅಧ್ಯಕ್ಷರ ಮೇಲೂ ಪೊಲೀಸ್ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸರಿಯಾಗಿ ತನಿಖೆ ನಡೆಸಿ ನ್ಯಾಯ ದೊರಕಿಸಕೊಡಬೇಕೆಂದು ಉರ್ವ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu