-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಕ್ರೇನ್ ನಲ್ಲಿ ಪಾಸ್‌ಪೋರ್ಟ್ ಕಳೆದುಕೊಂಡು ಸಂಕಷ್ಟಕ್ಕೊಳಗಾದ ಮಂಗಳೂರು ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ!

ಉಕ್ರೇನ್ ನಲ್ಲಿ ಪಾಸ್‌ಪೋರ್ಟ್ ಕಳೆದುಕೊಂಡು ಸಂಕಷ್ಟಕ್ಕೊಳಗಾದ ಮಂಗಳೂರು ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ!

ಮಂಗಳೂರು: ಉಕ್ರೇನ್​​ನಲ್ಲಿ ರಷ್ಯಾ ಮಾಡುತ್ತಿರುವ ಯುದ್ಧ ಮುಂದುವರಿದಿದೆ. ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಹಂತ ಹಂತವಾಗಿ ಮರಳಿ ತಾಯ್ನಾಡಿಗೆ ಕರೆತರುವ ಪ್ರಯತ್ನಗಳು ನಡೆಯುತ್ತಲೇ ಇದೆ. ಆದರೆ ಈ ಮಧ್ಯೆ ಉಕ್ರೇನ್​ನಲ್ಲಿ ಸಿಲುಕಿಕೊಂಡಿರುವ ಮಂಗಳೂರು ಮೂಲದ ವಿದ್ಯಾರ್ಥಿನಿ ಅನೈನಾ ಅನ್ನಾ ಪಾಸ್ ಪೋರ್ಟ್ ಕಳೆದುಕೊಂಡು ಸಂಕಷ್ಟಕ್ಕೊಳಗಾಗಿದ್ದಾಳೆ.

ಮಂಗಳೂರು ನಗರದ ದೇರೆಬೈಲ್​ ನಿವಾಸಿಯಾಗಿದ್ದ ಅನೈನಾ ಅನ್ನಾ ದಾಳಿಗೊಳಗಾದ ಉಕ್ರೇನ್ ನ ಖಾರ್ಕಿವ್ ನಗರದಲ್ಲಿದ್ದರು. ಈಕೆ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಯುನಿವರ್ಸಿಟಿ ಕಟ್ಟಡದ ಬಳಿಯಲ್ಲೇ ಕಟ್ಟಡವೊಂದು ಸ್ಫೋಟಗೊಂಡಿತ್ತು. ಆದ್ದರಿಂದ ಆಕೆ ಬಂಕರ್ ಬಿಟ್ಟು ರೈಲು ಹತ್ತಿದ್ದಾರೆ. ಆದರೆ, ಇವರ ಪಾಸ್​ಪೋರ್ಟ್ ಏಜೆಂಟ್ ಓರ್ವನ ಬಳಿಯಿದೆ. ಆತನಿಗೆ ಕರೆ ಮಾಡಿದರೆ ಆತನಿರುವಲ್ಲಿಗೆ ಬಂದು ಪಡೆಯುವಂತೆ ಹೇಳುತ್ತಿದ್ದಾರೆ. ಆದರೆ, ಅವನಿದ್ದ ಸ್ಥಳದಲ್ಲಿ ದಾಳಿ ನಡೆಯುತ್ತಿರುವುದರಿಂದ ಅಲ್ಲಿಗೆ ಹೋಗಲು ಸಾಧ್ಯವಾಗುತ್ತಿಲ್ಲ.

ಇದೀಗ ಅನೈನಾ ಅನ್ನಾ ರೈಲು ಹತ್ತಿ ಪೋಲೆಂಡ್​ ಕಡೆಗೆ ಹೊರಟಿರುವುದರಿಂದ ಪಾಸ್​ಪೋರ್ಟ್ ಸಿಗುವ ಸಾಧ್ಯತೆ ಕಡಿಮೆ. ಈ ಬಗ್ಗೆ ರಾಯಭಾರಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರು ತಾತ್ಕಾಲಿಕ ವ್ಯವಸ್ಥೆಯ ಭರವಸೆಯನ್ನು ನೀಡಿದ್ದಾರೆ ಎಂದು ಅನೈನಾ ಅನ್ನಾ ತಾಯಿ ಸಂಧ್ಯಾ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ