-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಭೀಕರ ರಸ್ತೆ ಅಪಘಾತ, ಬಿಜೆಪಿ ಮುಖಂಡನ ಕಾಲು ಕಟ್: ಐವರಿಗೆ ಗಂಭೀರ ಗಾಯ

ಭೀಕರ ರಸ್ತೆ ಅಪಘಾತ, ಬಿಜೆಪಿ ಮುಖಂಡನ ಕಾಲು ಕಟ್: ಐವರಿಗೆ ಗಂಭೀರ ಗಾಯ

ಕಲಬುರಗಿ: ನಿಯಂತ್ರಣ ತಪ್ಪಿದ ಕಾರೊಂದು ಭೀಕರವಾಗಿ ಅಪಘಾತಕ್ಕೀಡಾಗಿದ್ದು, ಬಿಜೆಪಿ ಮುಖಂಡ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಹೊರವಲಯದ ಶಹಬಾದ ರಸ್ತೆಯಲ್ಲಿ ನಡೆದಿದೆ.

ಶಹಬಾದ ರಸ್ತೆಯ ಕೇಂಬ್ರಿಡ್ಜ್​ ಶಾಲೆಯ ಬಳಿ ಈ ಅಪಘಾತವಾಗಿದೆ. ಈ ಅಪಘಾತದಲ್ಲಿ ಬಿಜೆಪಿ ಗ್ರಾಮಾಂತರ ಯುವ ಮೋರ್ಚದ ಮುಖಂಡ ವೀರೇಂದ್ರ ಪಾಟೀಲ್ ರಾಯಕೋಡ ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಐವರೂ ಕಲಬುರಗಿಯ ಜಗತ್ ಬಡಾವಣೆಯ ನಿವಾಸಿಗಳಾಗಿದ್ದಾರೆ. ಈ ಅಪಘಾತದಲ್ಲಿ ವೀರೇಂದ್ರ ಪಾಟೀಲ್ ಅವರು ಕಾಲು ತುಂಡಾಗಿದ್ದರೆ, ಇನ್ನಿಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಬಗ್ಗೆ ಕಲಬುರಗಿ ಸಂಚಾರಿ ಠಾಣೆ 2ರಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Ads on article

Advertise in articles 1

advertising articles 2

Advertise under the article