-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಳ್ಳಾಲ: ಯುವಕನಿಗೆ ನಾಲ್ವರ ತಂಡದಿಂದ ಚೂರಿ ಇರಿತ

ಉಳ್ಳಾಲ: ಯುವಕನಿಗೆ ನಾಲ್ವರ ತಂಡದಿಂದ ಚೂರಿ ಇರಿತ

ಉಳ್ಳಾಲ: ಯುವಕನೋರ್ವನ ಮೇಲೆ ದಾಳಿ ನಡೆಸಿರುವ ನಾಲ್ವರ ತಂಡವೊಂದು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ. 

ಉಳ್ಳಾಲದ ಕೋಡಿ ನಿವಾಸಿ ಅಲ್ ಸದೀನ್ (24) ಚೂರಿ ಇರಿತಕ್ಕೊಳಗಾದ ಯುವಕ.

ಅಲ್ ಸದೀನ್ ಮಸೀದಿ ಸಮೀಪ‌ದಲ್ಲಿದ್ದ ಸಂದರ್ಭ ನಾಲ್ವರ ತಂಡವೊಂದು ಆತನ ಮೇಲೆ ದಾಳಿ ನಡೆಸಿ, ಚೂರಿಯಿಂದ ಆತನ ಬೆನ್ನಿನ ಭಾಗಕ್ಕೆ ಇರಿದು ಕೊಲೆಗೆ ಯತ್ನಿಸಿದೆ. ಮಾಹಿತಿಗಳ ಪ್ರಕಾರ ಇವರೆಲ್ಲರೂ ಸ್ನೇಹಿತರಾಗಿದ್ದು, ಒಟ್ಟಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಯುವತಿಯೋರ್ವಳ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದೆ.

ದಾಳಿಗೊಳಗಾದ ಅಲ್ ಸದೀನ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳಿವೆ. ಕೆಲ ತಿಂಗಳುಗಳ ಹಿಂದೆ ಉಳ್ಳಾಲ ಠಾಣಾ ಪೊಲೀಸ್ ವಾಹನಕ್ಕೆ ಬಾಟಲಿಯಿಂದ ದಾಳಿ ನಡೆಸಿರುವ ಪ್ರಕರಣವೂ ಇರುವುದಾಗಿ‌ ತಿಳಿದು ಬಂದಿದೆ. ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿ ಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿ ತನಿಖೆ ಆರಂಭಿಸಿದೆ.

Ads on article

Advertise in articles 1

advertising articles 2

Advertise under the article

ಸುರ