-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಳ್ಳಾಲ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚೂರಿ ಇರಿತ

ಉಳ್ಳಾಲ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚೂರಿ ಇರಿತ

ಉಳ್ಳಾಲ: ಕ್ಷುಲ್ಲಕ ಕಾರಣಕ್ಕೆ  ಯುವಕನೋರ್ವನಿಗೆ ಟ್ಯಾಂಕರ್ ಚಾಲಕನೋರ್ವನು ಚೂರಿಯಿಂದ ಇರಿದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ. 

ಬಬ್ಬಕಟ್ಟ ಎಂಬಲ್ಲಿನ ನಿವಾಸಿ ರಿಝ್ವಾನ್ (24) ಚೂರಿ ಇರಿತಕ್ಕೊಳಗಾದವನು. ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಟ್ಯಾಂಕರ್ ಚಾಲಕ. 

ಟ್ಯಾಂಕರ್ ಚಾಲಕ ಖಲೀಲ್ ಎಂಬಾತ ರಿಝ್ವಾನ್ ಮನೆಗೆ ನೀರು ಸರಬರಾಜು ಮಾಡದೇ ಹೋಗಿದ್ದ. ಈ ಬಗ್ಗೆ ಖಲೀಲ್ ಬಳಿ ರಿಝ್ವಾನ್ ತಾಯಿ ವಿಚಾರಣೆ ಮಾಡಿದ್ದಾರೆ. ಆದರೆ ಖಲೀಲ್ ಅವರನ್ನು ನಿಂದಿಸಿದ್ದ ಎನ್ನಲಾಗಿದೆ. ಇದೇ ವಿಚಾರದ ಹಿನ್ನೆಲೆಯಲ್ಲಿ ರಿಝ್ವಾನ್ ಮೇಲಂಗಡಿ ಸಮೀಪ ಖಲೀಲ್ ನನ್ನು ವಿಚಾರಿಸಿದ್ದಾರೆ. ಈ ಸಂದರ್ಭ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೋಪಗೊಂಡ ಟ್ಯಾಂಕರ್ ಚಾಲಕ ಖಲೀಲ್,  ರಿಝ್ವಾನ್‌ ನನ್ನು ಚೂರಿಯಿಂದ ಇರಿದಿದ್ದಾನೆ ಎಂದು ದೂರಲಾಗಿದೆ. 

ಗಾಯಗೊಂಡ ರಿಝ್ವಾನ್‌ ರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article