-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಡಲ ತೀರದಲ್ಲಿ ನಡೆಯಿತು ಸಕ್ಕರೆ ನಾಡಿನ ಜೋಡಿಯ ವಿವಾಹ: ಸರಳ ಮದುವೆಗೆ ಅದ್ದೂರಿತನದ ಮೆರುಗು ನೀಡಿದ ಸಮುದ್ರರಾಯ!

ಕಡಲ ತೀರದಲ್ಲಿ ನಡೆಯಿತು ಸಕ್ಕರೆ ನಾಡಿನ ಜೋಡಿಯ ವಿವಾಹ: ಸರಳ ಮದುವೆಗೆ ಅದ್ದೂರಿತನದ ಮೆರುಗು ನೀಡಿದ ಸಮುದ್ರರಾಯ!

ಕುಂದಾಪುರ: ಸಮುದ್ರಗಳ ಮೊರೆತಗಳ ನಡುವೆಯೇ ಜೋಡಿಯೊಂದು ಇದೇ ಮೊದಲ ಬಾರಿಗೆ ಕಡಲ ತೀರದಲ್ಲಿ ಸಪ್ತಪದಿ ತುಳಿದಿದೆ. ಇದಾವುದೋ ಸಿನಿಮಾ ಅಥವಾ ಸೀರಿಯಲ್ ಕಥೆ ಹೇಳುತ್ತಿದ್ದಾರೆ ಎಂದು ಅಂದುಕೊಳ್ಳಬೇಡಿ. ನಿಜ ಜೀವನದಲ್ಲಿಯೇ ಸಮುದ್ರ ತೀರದಲ್ಲಿ ಸಕ್ಕರೆ ನಾಡಿನ ಜೋಡಿಯೊಂದು ಸಪ್ತಪದಿ ತುಳಿದಿದೆ. 

ಪ್ರಕೃತಿ ಮಡಿಲಲ್ಲಿ ಯಾವುದೇ ಆಡಂಬರದ ವೇದಿಕೆಯನ್ನು ಸಜ್ಜು ಮಾಡದೆ ಸರಳವಾಗಿ ಮದುವೆ ಆಗಿದ್ದರೂ ಪ್ರಕೃತಿಯ ಸೌಂದರ್ಯ ಈ ಮದುವೆಗೆ ಅದ್ದೂರಿತನ ನೀಡಿದೆ. ಇದೀಗ ಈ ಮದುವೆಯ ಫೋಟೋಗಳು ಭಾರೀ ವೈರಲ್​ ಆಗಿದ್ದು, ವ್ಹಾವ್​ ಎನ್ನುತ್ತಿದ್ದಾರೆ ನೆಟ್ಟಿಗರು. 

ಮಂಡ್ಯದ ಲಿಂಗಾಯತ ಸಮುದಾಯದ ಯುವಕ - ಯುವತಿ ಕುಂದಾಪುರದ ಎಂ.ಕೋಡಿ ಸಮೀಪ ಬುಧವಾರ ಬೆಳಗ್ಗೆ ಕಡಲ ತೀರದ ಪ್ರಕೃತಿ ಮಡಿಲಲ್ಲಿ ಮದುವೆಯಾಗಿದ್ದಾರೆ. ಕಡಲ ತೀರದಲ್ಲೇ ವಿವಾಹ ಮಂಟಪ ನಿರ್ಮಿಸಲಾಗಿತ್ತು. ಕಟ್ಕೇರಿ ಶಿವಾನಂದ ಐತಾಳ್​ ಸುಲಗ್ನೇ ಸಾವಧಾನ ಮಂತ್ರದ ಮಂಗಳ ಸೂತ್ರ ಧಾರಣೆ ಮಾಡಿಸಿದರು. ಬ್ರಾಹ್ಮಣ ಸಂಪ್ರದಾಯ ಪುರೋಹಿತರ ಉಪಸ್ಥಿತಿಯಲ್ಲಿ ಮದುವೆ ನಡೆದಿದೆ. 

ವಧೂ - ವರರ ಕಡೆಯವರು, ಬಂಧು ಮಿತ್ರರು ಈ ಮದುವೆಯಲ್ಲಿ ಭಾಗವಹಿಸಿದ್ದರು. ಆನೆಗುಡ್ಡೆ ದೇವಸ್ಥಾನದ ಪ್ರಸಾದವೇ ಮದುವೆ ಭೋಜನವಾಗಿತ್ತು.  ಪ್ರತಿಯೊಬ್ಬರಿಗೂ ಮದುವೆಯ ಬಗ್ಗೆ ನೂರಾರು ಕನಸು ಇರುತ್ತೆ. ಇದೇ ರೀತಿ ನಡೆಯಬೇಕು. ಇಂತಹದ್ದೇ ಕಲ್ಯಾಣ ಮಂಟಪ, ಧಿರಿಸು, ಆಭರಣ, ಭೋಜನದ ಮೆನು, ಪುಷ್ಪಾಲಂಕಾರ… ಅಬ್ಬಬ್ಬಾ ಒಂದಲ್ಲ, ಎರಡಲ್ಲ… ಆದರೆ ಪ್ರಕೃತಿ ಮಡಿಲಲ್ಲಿ ತೆರೆದ ಮಂಟಪದಲ್ಲಿಯೇ ಈ ಜೋಡಿ ಮದುವೆಯಾಗಿರೋದು ವಿಶೇಷವೆನಿಸಿದೆ.

Ads on article

Advertise in articles 1

advertising articles 2

Advertise under the article

ಸುರ