-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಎನ್ಐಟಿಕೆ ಬೀಚ್ ನಲ್ಲಿ ಸೋದರಿಯರಿಬ್ಬರು ಸಮುದ್ರ ಪಾಲು

ಮಂಗಳೂರು: ಎನ್ಐಟಿಕೆ ಬೀಚ್ ನಲ್ಲಿ ಸೋದರಿಯರಿಬ್ಬರು ಸಮುದ್ರ ಪಾಲು

ಮಂಗಳೂರು: ಮೃತಪಟ್ಟ ಕುಟುಂಬದ ಹಿರಿಯರೊಬ್ಬರ ಪಿಂಡ ಪ್ರದಾನ ಮಾಡಲೆಂದು ಕುಟುಂಬದೊಂದಿಗೆ ಎನ್ಐಟಿಕೆ ಬೀಚ್ ಗೆ ಬಂದಿದ್ದ ಸೋದರಿಯರಿಬ್ಬರು ಸಮುದ್ರ ಪಾಲಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮಂಗಳೂರು ಶಕ್ತಿನಗರ ಮೂಲದ  ತೃಷಾ(17), ವೈಷ್ಣವಿ(21) ಸಮುದ್ರಪಾಲಾದ ಸೋದರಿಯರು.

ಸಮುದ್ರಪಾಲಾಗಿರುವವರು ಸೋದರ ಸಂಬಂಧದಲ್ಲಿ ಸಹೋದರಿಯರಾಗಿದ್ದಾರೆ. ಇತ್ತೀಚೆಗೆ ಮೃತಪಟ್ಟ ತಮ್ಮ ಕುಟುಂಬದ ಹಿರಿಯರ ತಿಥಿ ಕಾರ್ಯದ ನಿಮಿತ್ತ ಪಿಂಡ ಪ್ರದಾನ ಮಾಡಲೆಂದು ಕುಟುಂಬದವರೊಂದಿಗೆ ಇವರು ಎನ್ಐಟಿಕೆ ಬಳಿಯಿರುವ ಸಮುದ್ರ ತೀರಕ್ಕೆ ಬಂದಿದ್ದರು. ಈ ವೇಳೆ  ವೆಂಕಟೇಶ್ ಎಂಬವರು ವೈಷ್ಣವಿ ಹಾಗೂ ತ್ರಿಷಾರೊಂದಿಗೆ ಆಟವಾಡಲೆಂದು ನೀರಿಗಿಳಿದಿದ್ದಾರೆ. ಈ ಸಂದರ್ಭ ಅಲೆಗಳ ಹೊಡೆತಕ್ಕೆ ಸಿಲುಕಿರುವ ಮೂವರು ಕೊಚ್ಚಿ ಹೋಗಿದ್ದಾರೆ. 

ತಕ್ಷಣವೇ ಅಲ್ಲಿದ್ದ ಸ್ಥಳೀಯ ಈಜುಗಾರರು ಹಾಗೂ ಸುರತ್ಕಲ್ ಪೊಲೀಸ್ ಠಾಣೆಯ ಹೋಮ್ ಗಾರ್ಡ್ ಪ್ರಶಾಂತ್ ಕಾರ್ಯಾಚರಣೆ ನಡೆಸಿ ಮೂವರನ್ನು ಸಮುದ್ರದಿಂದ ಮೇಲಕ್ಕೆತ್ತಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ವೈಷ್ಣವಿ ಹಾಗೂ ತ್ರಿಷಾ ಮೃತಪಟ್ಟಿದ್ದಾರೆ. ವೆಂಕಟೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ