-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಶಾಲಾ ವಿದ್ಯಾರ್ಥಿನಿಗೆ ಮೊಬೈಲ್ ನಂಬರ್ ಬರೆದು ನೀಡಿದ್ದ ಖಾಸಗಿ ಸಿಟಿ ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ

ಮಂಗಳೂರು: ಶಾಲಾ ವಿದ್ಯಾರ್ಥಿನಿಗೆ ಮೊಬೈಲ್ ನಂಬರ್ ಬರೆದು ನೀಡಿದ್ದ ಖಾಸಗಿ ಸಿಟಿ ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ

ಮಂಗಳೂರು: 8ನೇ ತರಗತಿಯ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಬಸ್ ಟಿಕೆಟ್ ನಲ್ಲಿ ಮೊಬೈಲ್ ನಂಬರ್ ಬರೆದು ನೀಡಿದ್ದ ಖಾಸಗಿ ಸಿಟಿ ಬಸ್ ನಿರ್ವಾಹಕನನ್ನು ಮಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. 

ಬಾಗಲಕೋಟೆ ಜಿಲ್ಲೆ ಮೂಲದ ಮಂಜುನಾಥ(21) ವಶಪಡಿಸಿಕೊಂಡಿರುವ ಆರೋಪಿ. ಮಂಜುನಾಥ ಮಂಗಳೂರಿನ ಸ್ಟೇಟ್ ಬ್ಯಾಂಕ್ ನಿಂದ ಬೋಂದೆಲ್ ನಡುವೆ ಸಂಚರಿಸುವ ರೂಟ್ ಸಂಖ್ಯೆ 19ರ ಖಾಸಗಿ ಸಿಟಿ ಬಸ್ ನಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ.

ಈತ ಬಸ್ ನಲ್ಲಿ ಬರುತ್ತಿದ್ದ 8ನೇ ತರಗತಿಯ ವಿದ್ಯಾರ್ಥಿನಿಗೆ ಟಿಕೆಟ್ ನಲ್ಲಿ ಬರೆದು ತನ್ನ ಫೋನ್ ನಂಬರ್ ಅನ್ನು ನೀಡಿದ್ದ. ಈ ವಿಚಾರ ಬಾಲಕಿಯ ತಾಯಿಗೆ ಗೊತ್ತಾಗಿದೆ.‌ ಆಕೆ ತಕ್ಷಣ ಸಾರ್ವಜನಿಕ ಸ್ಥಳದಲ್ಲಿಯೇ ಬಸ್ ನಿರ್ವಾಹಕ ಮಂಜುನಾಥನನ್ನು ತರಾಟೆಗೆ ತೆಗೆದುಕೊಂಡು ಧರ್ಮದೇಟು ನೀಡಿದ್ದಾರೆ. ಆತನನ್ನು ಹಿಗ್ಗಾಮುಗ್ಗ ಥಳಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ಬಳಿಕ ಬಾಲಕಿಯ ತಾಯಿ ಬಸ್ ನಿರ್ವಾಹಕ ಮಂಜುನಾಥನ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದರು‌. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ‌.






Ads on article

Advertise in articles 1

advertising articles 2

Advertise under the article

ಸುರ