-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಕಪಿಲ ಗೋಶಾಲೆಯ ಜಾನುವಾರು ಕಳವುಗೈದ ಆರೋಪಿ ಅರೆಸ್ಟ್

ಮಂಗಳೂರು: ಕಪಿಲ ಗೋಶಾಲೆಯ ಜಾನುವಾರು ಕಳವುಗೈದ ಆರೋಪಿ ಅರೆಸ್ಟ್

ಮಂಗಳೂರು: ನಗರದ ಮರವೂರಿನಲ್ಲಿ ಕಾರ್ಯಾಚರಿಸುತ್ತಿರುವ ಕಪಿಲ ಗೋಶಾಲೆಯ ಮೂರು ಜಾನುವಾರುಗಳನ್ನು ಕಳವುಗೈದ ಆರೋಪಿಯೊಬ್ಬನನ್ನು ಬಜ್ಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಮಂಗಳೂರು ಜೋಕಟ್ಟೆ ನಿವಾಸಿ, ಪ್ರಸ್ತುತ ಬಜ್ಪೆ ಭಟ್ರಕೆರೆ ನಿವಾಸಿ ಮಹಮ್ಮದ್ ರಾಝಿಕ್ (19) ಬಂಧಿತ ಆರೋಪಿ.

ನಗರದ ಮರವೂರಿನಲ್ಲಿ ಕಾರ್ಯಾಚರಿಸುತ್ತಿರುವ ಕಪಿಲ ಗೋಶಾಲೆಯ ಮೇಯಲು ಬಿಟ್ಟ ಜಾನುವಾರುಗಳಲ್ಲಿ ಒಂದು ಹೋರಿ ಹಾಗೂ 2 ಕಪಿಲ ತಳಿಯ ಹಸುಗಳನ್ನು ಗೋಕಳ್ಳರು ಕಳವುಗೈದಿದ್ದಾರೆ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಕರಣದ ಓರ್ವ  ಆರೋಪಿ ಮಹಮ್ಮದ್ ರಾಝಿಕ್ ನನ್ನು ಕೆಂಜಾರು ಮರವೂರಿನಲ್ಲಿ ಬಂಧಿಸಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳು ಶಾಮೀಲಾಗಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಶೀಘ್ರ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article