-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೇರೊಬ್ಬನಿಂದ ಪರೀಕ್ಷೆ ಬರೆದು ಕೆಲಸ ಗಿಟ್ಟಿಸಿಕೊಂಡ ಆರೋಪ: ಪೇದೆ ಮೇಲೆ ಪ್ರಕರಣ ದಾಖಲು

ಬೇರೊಬ್ಬನಿಂದ ಪರೀಕ್ಷೆ ಬರೆದು ಕೆಲಸ ಗಿಟ್ಟಿಸಿಕೊಂಡ ಆರೋಪ: ಪೇದೆ ಮೇಲೆ ಪ್ರಕರಣ ದಾಖಲು

ಬೆಂಗಳೂರು: ಮೀಸಲು ಪಡೆ ಕಾನ್​ಸ್ಟೇಬಲ್​ ನೇಮಕಾತಿ ಪರೀಕ್ಷೆಯನ್ನು ಬೇರೊಬ್ಬ ಅಭ್ಯರ್ಥಿಯಿಂದ ಬರೆಸಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿರುವ ಆರೋಪದಲ್ಲಿ ಪೇದೆಯೊಬ್ಬನ ವಿರುದ್ಧ ಹಲಸೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್​ಆರ್​ಪಿ ಪಡೆ 1ನೇ ಬೆಟಾಲಿಯನ್​ ಸಹಾಯಕ ಕಮಾಂಡೆಂಟ್​ ಎಂ.ಜಿ.ಸುರೇಶ್​ ಈ ಬಗ್ಗೆ ದೂರು ನೀಡಿದ್ದಾರೆ. 

ಬೆಳಗಾವಿ ಜಿಲ್ಲೆಯ ಗೋಕಾಕ್​ ತಾಲೂಕು ದಡೇರಹಟ್ಟಿ ನಿವಾಸಿ ಸಿದ್ದು ಕುರಿ ಎಂಬಾತನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. 

2020ರ ಮಾರ್ಚ್​ 28ರಂದು ಪೊಲೀಸ್​ ಇಲಾಖೆಯ ವಿಶೇಷ ಸಶಸ್ತ್ರ ಮೀಸಲು ಪಡೆ ಕಾನ್​ಸ್ಟೇಬಲ್​ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ ವ್ಯಕ್ತಿಯ ಬದಲಿಗೆ ಲಿಖಿತ ಪರೀಕ್ಷೆ, ದೇಹದಾರ್ಡ್ಯ ಮತ್ತು ಸಹಿಷ್ಣುತೆ ಪರೀಕ್ಷೆಗಳಿಗೆ ಅರ್ಜಿದಾರನ ಬದಲಿಗೆ ಬೇರೊಬ್ಬ ಭಾಗವಹಿಸಿದ್ದಾನೆ ಎಂದು ಬೆಳಗಾವಿ ಕೆಎಸ್​ಆರ್​ಪಿ ಐಜಿಪಿ ಶಂಖೆ ವ್ಯಕ್ತಪಡಿಸಿದ್ದಾರೆ. ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ ಬಳಿಕ ದಾಖಲೆ ಪರಿಶೀಲನೆಗೆ ಹಾಗೂ ವೈದ್ಯಕೀಯ ಪರೀಕ್ಷೆಗೆ ಖುದ್ದು ಅಭ್ಯರ್ಥಿಯೇ ಭಾಗವಹಿಸಿದ್ದಾನೆಯೇ? ಅಥವಾ ಬೇರೆ ಅಭ್ಯರ್ಥಿ ಹಾಜರಾಗಿದ್ದಾನೆಯೇ? ಎಂಬುದರ ತನಿಖೆ ನಡೆಸುವಂತೆ ದೂರಿನಲ್ಲಿ ಸುರೇಶ್​ ಮನವಿ ಮಾಡಿದ್ದಾರೆ. ಈ ದೂರಿನ್ವಯ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ಹಿಂದೆ ಸಹ ಕೆಎಸ್​ಆರ್​ಪಿ ಕಾನ್​ಸ್ಟೇಬಲ್​ ನೇಮಕಾತಿಯಲ್ಲಿ ಬದಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿರುವುದು ಸಿಸಿ ಕ್ಯಾಮರಾ ದೃಶ್ಯಾವಳಿಯಲ್ಲಿ ಪತ್ತೆಯಾಗಿತ್ತು.

Ads on article

Advertise in articles 1

advertising articles 2

Advertise under the article