-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗಾಂಜಾ ವ್ಯಸನಿ ಪುತ್ರನ ಕಣ್ಣಿಗೆ ಖಾರದ ಪುಡಿ ಹಾಕಿ ಥಳಿಸಿದ ತಾಯಿ!

ಗಾಂಜಾ ವ್ಯಸನಿ ಪುತ್ರನ ಕಣ್ಣಿಗೆ ಖಾರದ ಪುಡಿ ಹಾಕಿ ಥಳಿಸಿದ ತಾಯಿ!

ಸೂರ್ಯಪೇಟೆ(ತೆಲಂಗಾಣ): ಗಾಂಜಾ ವ್ಯಸನಿ ಪುತ್ರನಿಗೆ ತಾಯಿಯೇ ಕಣ್ಣಿಗೆ ಖಾರದ ಪುಡಿ ಹಾಕಿ ಥಳಿಸಿ ಭಾರಿ ಶಿಕ್ಷೆ ನೀಡಿರುವ ಘಟನೆ ಸೂರ್ಯಪೇಟೆ ಜಿಲ್ಲೆಯ ಕೊಡಾದ ನಗರದ ಗಾಂಧಿ ನಗರದಲ್ಲಿ ನಡೆದಿದೆ. 

ಮಹಿಳೆಯ 16 ವರ್ಷದ ಪುತ್ರ ಕಳೆದ ಎರಡು ವರ್ಷಗಳಿಂದ ಗಾಂಜಾ ಚಟವನ್ನು ಅಂಟಿಸಿಕೊಂಡಿದ್ದ.  ಗಾಂಜಾ ಸೇವನೆ ನಿಲ್ಲಿಸುವಂತೆ ತಾಯಿ ಎಷ್ಟು ಬುದ್ಧಿವಾದ ಹೇಳಿದರೂ ಆತ ಅವಳ ಮಾತನ್ನು ಕೇಳಿರಲಿಲ್ಲ. ಪರಿಣಾಮ ತಾಯಿ ಈ ನಿರ್ಧಾರಕ್ಕೆ ಬಂದಿದ್ದಾಳೆ.

ಅವನ ವರ್ತನೆಯಿಂದ ಬೇಸತ್ತ ಈ ತಾಯಿ ಇದೀಗ, ಆತನನ್ನು ಹಗ್ಗದಿಂದ ಕಟ್ಟಿ ಹಾಕಿ ಕಣ್ಣಿಗೆ ಮೆಣಸಿನ ಪುಡಿ ಎರಚಿ ಅಮಾನುಷವಾಗಿ ಥಳಿಸಿದ್ದಾಳೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.‌ ಈ ಬಗ್ಗೆ ಕೆಲವು ನೆಟಿಜನ್‌ಗಳು ತಾಯಿಯ ಕ್ರಮವನ್ನು ಬೆಂಬಲಿಸಿದ್ದಾರೆ. ಕೆಲವರು ಪುತ್ರನೊಂದಿಗೆ ಈ ರೀತಿ ಕ್ರೂರವಾಗಿ ವರ್ತಿಸಬಾರದು ಎಂದು ಹೇಳುತ್ತಿದ್ದಾರೆ. ಇನ್ನು ಕೆಲವರು ಆಕೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವಂತೆ ಸಲಹೆ ನೀಡುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ