-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸರಿಯಾದ ಸಮಯಕ್ಕೆ ವರ ಮಂಟಪಕ್ಕೆ ಬರಲಿಲ್ಲವೆಂದು ಬೇರೆಯವನ ಕೈ ಹಿಡಿದ ವಧು

ಸರಿಯಾದ ಸಮಯಕ್ಕೆ ವರ ಮಂಟಪಕ್ಕೆ ಬರಲಿಲ್ಲವೆಂದು ಬೇರೆಯವನ ಕೈ ಹಿಡಿದ ವಧು

ಮುಂಬೈ: ಮುಹೂರ್ತದ ಸಮಯಕ್ಕೆ ಸರಿಯಾಗಿ ವರ ಬರಲಿಲ್ಲವೆಂದು ವಧು ಬೇರೊಬ್ಬನೊಂದಿಗೆ ವಿವಾಹವಾಗಿರುವ ಘಟನೆಯೊಂದು ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ. 

ಈ ಮದುವೆ ಸಮಾರಂಭವು ಎಪ್ರಿಲ್​ 22ರಂದು ಬುಲ್ಧಾನಾ ಜಿಲ್ಲೆಯ ಮಲ್ಕಾಪುರ್​ ಪಂಗ್ರಾ ಗ್ರಾಮದಲ್ಲಿ. ಮದುವೆಗಾಗಿ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗಿತ್ತು. ಸಂಜೆ 4 ಗಂಟೆಗೆ ಮದುವೆ ಮುಹೂರ್ತವಿತ್ತು. ಆದರೆ, ಮುಹೂರ್ತದ ಸಮಯವಾದರೂ ವರ ಮಾತ್ರ ಬರಲೇ ಇಲ್ಲ. ವಧು ಹಾಗೂ ಆಕೆಯ ಕುಟುಂಬ ಸಾಕಷ್ಟು ಕಾದರೂ ಮದುಮಗನ ಪತ್ತೆಯೇ ಇರಲಿಲ್ಲ. 

ಸಮಯ 8 ಗಂಟೆಯಾದರೂ ಮದುಮಗ ಮಾತ್ರ ಬರಲೇ ಇಲ್ಲ. ನೋಡುವವರೆಗೆ ನೋಡಿದ ವಧುವಿನ ತಂದೆ ಕೊನೆಗೆ ತಮ್ಮ ಸಂಬಂಧಿಕರೊಬ್ಬರೊಂದಿಗೆ ಪುತ್ರಿಯ ವಿವಾಹವನ್ನು ಅದೇ ಮಂಟಪದಲ್ಲಿ ನೆರವೇರಿಸಿದ್ದಾರೆ.

ವರನಿಗಾಗಿ 8 ಗಂಟೆಯವರೆಗೂ ಕಾದರೂ ಆತನ ಪತ್ತೆಯಿರಲಿಲ್ಲ. ಆ ಬಳಿಕ ಮದುವೆ ಮಂಟಪಕ್ಕೆ ಆಗಮಿಸಿದ ವರ ಪಾನಮತ್ತನಾಗಿದ್ದ. ತನ್ನ ಸ್ನೇಹಿತರ ಜತೆ ಸೇರಿಕೊಂಡು ಕಂಠಪೂರ್ತಿ ಕುಡಿದು ಕುಣಿದು ಕುಪ್ಪಳಿಸಿ ಮದ್ಯದ ಅಮಲಿನಲ್ಲೇ ಮಂಟಪಕ್ಕೆ ಬಂದಿದ್ದ. 4 ಗಂಟೆಯ ಬದಲು 8 ಗಂಟೆಗೆ ಬಂದಿದ್ದಲ್ಲದೆ, ನಮ್ಮೊಂದಿಗೆ ಜಗಳ ಆಡಲು ಆರಂಭಿಸಿದ. ಯಾಕೋ ಇದು ಸರಿಯಿಲ್ಲ ಅಂದುಕೊಂಡು ನಮ್ಮ ಸಂಬಂಧಿಕರಲ್ಲಿ ಒಬ್ಬರಿಗೆ ಪುತ್ರಿಯನ್ನು ಕೊಟ್ಟು ಅದೇ ಮಂಟಪದಲ್ಲಿ ಮದುವೆ ಮಾಡಿಕೊಟ್ಟೆವು ಎಂದು ವಧುವಿನ ತಂದೆ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ