-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಎಸ್ಎಸ್ಎಲ್ ಸಿ ಪರೀಕ್ಷೆ ಉತ್ತರ ಪತ್ರಿಕೆಯಲ್ಲಿ ಸದ್ದು ಮಾಡಿದ ‘ಪುಷ್ಪ: ದಿ ರೈಸ್’ ಸಿನಿಮಾ ತಗ್ಗೆದೆಲೆ ಡೈಲಾಗ್

ಎಸ್ಎಸ್ಎಲ್ ಸಿ ಪರೀಕ್ಷೆ ಉತ್ತರ ಪತ್ರಿಕೆಯಲ್ಲಿ ಸದ್ದು ಮಾಡಿದ ‘ಪುಷ್ಪ: ದಿ ರೈಸ್’ ಸಿನಿಮಾ ತಗ್ಗೆದೆಲೆ ಡೈಲಾಗ್

ಹೈದರಾಬಾದ್​: ‘ಪುಷ್ಪ: ದಿ ರೈಸ್’ ಸಿನಿಮಾ ಸೂಪರ್ ಹಿಟ್ ಆಗಿರೋದು ಎಲ್ಲರಿಗೂ ಗೊತ್ತಿದೆ. ಅದರ ಕೆಲವೊಂದು ಡೈಲಾಗ್‌ಗಳು ಹಾಗೂ ಸಿಗ್ನೇಚರ್​ ಸ್ಟೆಪ್ಸ್​ ರೀಲ್ಸ್ ಗಳ ಮೂಲಕ ಆನ್‌ಲೈನ್‌ನಲ್ಲಿ ಟ್ರೆಂಡಿಂಗ್​ನಲ್ಲಿ ಈಗಲೂ ಇದೆ. ಅದರಲ್ಲೂ ಅಲ್ಲು ಅರ್ಜುನ್ ಅವರ ತಗ್ಗೆದೆಲೆ ಡೈಲಾಗ್​ ಮಾತ್ರ ಸಿಕ್ಕಾಪಟ್ಟೆ ಕ್ರೇಜ್​ ಹುಟ್ಟುಹಾಕಿದೆ. ಜಗತ್ತಿನಾದ್ಯಂತ ಜನತೆ ಅದರ ಅನುಕರಣೆ ಮಾಡಿದ್ದಾರೆ. 

ಯುವಕರಿಂದ ಹಿಡಿದು ವೃದ್ಧರವರೆಗೂ ತೆಗ್ಗೆದೆಲೆ ಡೈಲಾಗ್​ ಹೊಡೆದು ಸಿಗ್ನೆಚರ್​ ಸ್ಟೈಲ್ ಕಾಪಿ ಮಾಡಿರುವುದನ್ನು ನಾವೆಲ್ಲ ನೋಡಿದ್ದೇವೆ. ಸಿನಿಮಾ ಬಿಡುಗಡೆಯಾಗಿ 4 ತಿಂಗಳುಗಳು ಕಳೆದರೂ ಸಿನಿಮಾ ಮೇಲಿನ ಕ್ರೇಜ್​ ಮಾತ್ರ ಇನ್ನು ಕಡಿಮೆಯಾಗಿಲ್ಲ. ಇದೀಗ ಪಶ್ಚಿಮ ಬಂಗಾಳದಲ್ಲಿ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲೂ ತೆಗ್ಗೆದೆಲೆ ಡೈಲಾಗ್​ ಸದ್ದು ಮಾಡಿದೆ. ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಯೊಬ್ಬ ಉತ್ತರ ಬರೆಯುವ ಬದಲು ಪುಷ್ಪ ಸಿನಿಮಾ್ ಡೈಲಾಗ್​ ಅನ್ನು ತನ್ನದೇ ರೀತಿಯಲ್ಲಿ ಬರೆದಿದ್ದಾನೆ. 

'ಪುಷ್ಪ…ಪುಷ್ಪರಾಜ್​.. ಅಪುನ್​ ಲಿಖೇಗಾ ನಹಿ' ಎಂದು ಬರೆದಿದ್ದು, ನಾನು ಪರೀಕ್ಷೆ ಬರೆಯೋದೇ ಇಲ್ಲ ಎಂಬುದು ಅದರರ್ಥವಾಗಿದೆ. ವಿದ್ಯಾರ್ಥಿಯ ಉತ್ತರ ಪತ್ರಿಕೆಯ ಫೋಟೋವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ಶಿಕ್ಷಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ಸಿಕ್ಕಾಪಟ್ಟೆ ವೈರಲ್​ ಆಗಿದೆ. ಅನೇಕರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ