-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೆಎಸ್ಆರ್ ಟಿಸಿ ಬಸ್ ಕಿಟಕಿ ತೆರೆಯಲು ಹೇಳಿದ್ದ ವಿದ್ಯಾರ್ಥಿನಿಗೆ ಚಾಲಕ ಮಾಡಿದ್ದೇನು ಗೊತ್ತೇ?

ಕೆಎಸ್ಆರ್ ಟಿಸಿ ಬಸ್ ಕಿಟಕಿ ತೆರೆಯಲು ಹೇಳಿದ್ದ ವಿದ್ಯಾರ್ಥಿನಿಗೆ ಚಾಲಕ ಮಾಡಿದ್ದೇನು ಗೊತ್ತೇ?

ಪತ್ತನಂತಿಟ್ಟ: ಕೆಎಸ್​ಆರ್​ಟಿಸಿ ಸೂಪರ್​ ಡಿಲಕ್ಸ್​ ಬಸ್ ಪ್ರಯಾಣದಲ್ಲಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿರುವ ಆರೋಪದ ಮೇಲೆ ಚಾಲಕನ ವಿರುದ್ಧ ದೂರು ದಾಖಲಾಗಿದೆ. 

ಈ ಘಟನೆ ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಪತ್ತನಂತಿಟ್ಟ ಡಿಪೋದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೂಪರ್​ ಡೀಲಕ್ಸ್​ ಬಸ್ಸಿನಲ್ಲಿ ನಡೆದಿದೆ ಎನ್ನಲಾಗಿದೆ. ಸಂತ್ರಸ್ತ ವಿದ್ಯಾರ್ಥಿನಿ ಬೆಂಗಳೂರು  ನಿವಾಸಿಯಾಗಿದ್ದಾಳೆ. ಈಕೆ ಈಮೇಲ್​ ಮುಖಾಂತರ ಕೇರಳ ಪೊಲೀಸರಿಗೆ ದೂರು ನೀಡಿದ್ದಾಳೆ. 

ಸಂತ್ರಸ್ತ ವಿದ್ಯಾರ್ಥಿನಿ ಬಸ್ ನ ಕಿಟಕಿ  ತೆರೆಯಲೆಂದು ಚಾಲಕನ ಸಹಾಯ ಕೋರಿದ್ದಾಳೆ. ಆಗ ಆತ ಕಿಟಕಿ ತೆಗೆಯುವ ನೆಪದಲ್ಲಿ ಎಲ್ಲೆಲ್ಲೂ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸುವುದ್ದಾನೆ. ಇದರಿಂದ ವಿದ್ಯಾರ್ಥಿನಿ ಗಾಬರಿಯಾಗಿದ್ದಾಳೆ. ಈ ಸಂದರ್ಭ ತಾನು ಅಸಹಾಯಕಳಾಗಿದ್ದೆ. ಚಾಲಕನ ವರ್ತನೆಗೆ ವಿರುದ್ಧವಾಗಿ ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲ. 

ಇದೀಗ ಚಾಲಕ ಶಾಜಹನ್​ ವಿರುದ್ಧ ದೂರು ದಾಖಲಾಗಿದ್ದು, ವಿಜಿಲೆನ್ಸ್​ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ. ಕೃಷ್ಣಗಿರಿ ಸಮೀಪದಲ್ಲಿ ಶನಿವಾರ ಘಟನೆ ನಡೆಯಿತು ಎಂದು ಸಂತ್ರಸ್ತೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ. 

Ads on article

Advertise in articles 1

advertising articles 2

Advertise under the article

ಸುರ