-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪರೀಕ್ಷೆಯ ದಿನಾಂಕ ಮರೆತು ಹೋಗಿದ್ದರಿಂದಲೇ ಈ ಬಾಲಕಿಯ ಆತ್ಮಹತ್ಯೆ ನಡೆಯಿತೇ?

ಪರೀಕ್ಷೆಯ ದಿನಾಂಕ ಮರೆತು ಹೋಗಿದ್ದರಿಂದಲೇ ಈ ಬಾಲಕಿಯ ಆತ್ಮಹತ್ಯೆ ನಡೆಯಿತೇ?

ನೆಲಮಂಗಲ: 15ರ ಬಾಲೆಯೊಬ್ಬಳು ಡೆತ್​ನೋಟ್ ಬರೆದಿಟ್ಟು ನೇಣಿಗೆ ಶರಣಾಗಿ ಪ್ರಾಣ ಕಳೆದುಕೊಂಡಿರುವ ದುರಂತವೊಂದು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು 

ಬೆಂಗಳೂರು ಉತ್ತರ ತಾಲೂಕು ಸಿದ್ದನಹೊಸಹಳ್ಳಿ ಗ್ರಾಮ ನಿವಾಸಿ ಪ್ರೀತಿ (15) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. 


ಪ್ರೀತಿ ಹಿರಿಯೂರು ಮೂಲದ ವೆಂಕಟೇಶ್ ಎಂಬವರು ಪುತ್ರಿ. ಇವಳು ಚಿಕ್ಕಬಿದರಕಲ್ಲು ಶಾಲೆಯಲ್ಲಿ ಎಸ್ಎಸ್ಎಲ್ ಸಿ ಮಾಡುತ್ತಿದ್ದಳು. ‘ನನ್ನ ಸಾವಿಗೆ ಯಾರೂ ಕಾರಣವಲ್ಲ, ಐ ಯಾಮ್ ಸಾರಿ ಅಪ್ಪ, ನನ್ನನ್ನು ಕ್ಷಮಿಸಿ..’ ಎಂದು ಡೆತ್​ನೋಟ್ ಬರೆದಿಟ್ಟು, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಪರೀಕ್ಷೆಯ ದಿನಾಂಕ ಮರೆತು ಹೋಗಿರುವ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾಳೆ ಎಂದು ಎನ್ನಲಾಗುತ್ತಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಖಚಿತವಾಗಿ ತಿಳಿದುಬಂದಿಲ್ಲ. 

ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article

ಸುರ