-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮೂಡುಬಿದಿರೆ: 9ರ ಬಾಲೆಯಿಂದ ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ

ಮೂಡುಬಿದಿರೆ: 9ರ ಬಾಲೆಯಿಂದ ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ

ಮೂಡುಬಿದಿರೆ: 9ರ ಪುಟ್ಟ ಬಾಲೆಯೋರ್ವಳು ಕ್ಯಾನ್ಸರ್ ಪೀಡಿತರಿಗಾಗಿ ತನ್ನ ನೀಳವಾದ ಕೇಶವನ್ನೇ ದಾನ ಮಾಡಿದ್ದಾಳೆ.  

ಹೌದು ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿ ತಾನಿಯಾ ಎಂಬ 9ರ ಬಾಲೆ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶವನ್ನೇ ದಾನ ಮಾಡಿ ಮಾನವೀಯತೆ ಮೆರೆದ ಬಾಲೆ. ಈಕೆ ತನ್ನ ನೀಳವಾದ ಕೂದಲಿನ 16 ಇಂಚಿನಷ್ಟು ಕೇಶವನ್ನು ಕ್ಯಾನ್ಸರ್ ಪೀಡಿತ ರೋಗಿಗಳಿಗಾಗಿ ದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾಳೆ.  ಪಡುಮಾರ್ನಾಡಿನ ಸೇವಾ ಮಾಣಿಕ್ಯವೆಂದು ಬಿರುದು ಪಡೆದಿರುವ ಲೋಹಿತ್ ಎಸ್ ಹಾಗೂ ಟೆಸ್ಲಿನಾ ದಂಪತಿಯ ಪುತ್ರಿಯಾದ ತಾನಿಯ ಎಸ್. ಅವರು ಹ್ಯುಮಾನಿಟಿ ಸಂಸ್ಥೆಯ ರೋಶನ್ ಬೆಳ್ಮಣ್ ಅವರ ಕ್ಯಾನ್ಸರ್ ಪೀಡಿತರಿಗಾಗಿ ನಿರ್ಮಿಸಿರುವ ಕೇಶ ದಾನ ಮಹಾಯೋಜನೆಗೆ ತನ್ನ ಕೂದಲನ್ನು ದಾನ ಮಾಡಿದ್ದಾಳೆ.

ಇತ್ತೀಚೆಗಷ್ಟೇ ತಾನಿಯಾ ಚಿಕ್ಕಮ್ಮ ಕ್ಯಾರಲ್ ಅವರು‌ ಕೂಡಾ ಕ್ಯಾನ್ಸರ್ ಪೀತರಿಗೆ ತಮ್ಮ ಕೂದಲನ್ನು ದಾನ ಮಾಡಿದ್ದರು‌. ಇದರಿಂದ ಪ್ರೇರಣೆಗೊಂಡ ತಾನಿಯಾ ಈ ನಿರ್ಧಾರ ಕೈಗೊಂಡಿದ್ದಾರೆ. ಚಿಕ್ಕಮ್ಮ ಕ್ಯಾನ್ಸರ್ ಪೀಡಿತರ ಬಗ್ಗೆ ನೀಡಿರುವ ಮಾಹಿತಿಯಂತೆ ತಾನೂ ತನ್ನ ಕೂದಲನ್ನು ದಾನ ಮಾಡುವುದಾಗಿ ತಿಳಿಸಿದ್ದಾಳೆ. ಪುತ್ರಿಯ ಮಾನವೀಯ ಕಾಳಜಿಗೆ ಪೋಷಕರು ಸಮ್ಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ತಾನಿಯಾ ತನ್ನ ಕೇಶವನ್ನು ದಾನ ಮಾಡಿದ್ದಾಳೆ.

Ads on article

Advertise in articles 1

advertising articles 2

Advertise under the article

ಸುರ