-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೆಎಸ್ಆರ್ ಟಿಸಿ ಬಸ್ ಅಪಘಾತದಲ್ಲಿ ಬೈಕ್ ಸವಾರ ಯುವಕರಿಬ್ಬರು ಬಲಿ

ಕೆಎಸ್ಆರ್ ಟಿಸಿ ಬಸ್ ಅಪಘಾತದಲ್ಲಿ ಬೈಕ್ ಸವಾರ ಯುವಕರಿಬ್ಬರು ಬಲಿ

ವಿಜಯನಗರ: ಕೆಎಸ್ಆರ್ ಟಿಸಿ  ಬಸ್ ಹಾಗೂ ಬೈಕ್ ನಡುವೆ ಸಂಭವಿಸಿರುವ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರು ಬಳಿ ನಡೆದಿದೆ.


ಅಪಘಾತದಲ್ಲಿ ಕಿರಣ್ (23) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವೆಂಕಟೇಶ (25) ಎಂಬಾತ ಆಸ್ಪತ್ರೆಗೆ ಸಾಗಿಸುವ ವೇಳೆ ಅಸುನೀಗಿದ್ದಾನೆ.

ಕೆಎಸ್ಆರ್ ಟಿಸಿ ಬಸ್ ಹೊಸಪೇಟೆಯಿಂದ ಬಳ್ಳಾರಿಗೆ ಕಡೆಗೆ ತೆರಳುತ್ತಿತ್ತು. ಬೈಕ್ ಸವಾರರು ಗಾದಿಗನೂರಿನ ಜಾತ್ರೆಗೆ ಹೋಗಿ ತಮ್ಮ ಸ್ವಗ್ರಾಮ ಕಾಕುಬಾಳುಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಮುಖಾಮುಖಿಯಾಗಿ ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಈ ಸಾವು ಸಂಭವಿಸಿದೆ. 

ಸ್ಥಳಕ್ಕೆ ಹೊಸಪೇಟೆಯ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದರು. ಈ ಬಗ್ಗೆ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ