-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾರು - ಬೈಕ್ ನಡುವೆ ಭೀಕರ ಅಪಘಾತ: ತಂದೆ - ಮಗ ಮೃತ್ಯು, ತಾಯಿ - ಮಗನಿಗೆ ಗಂಭೀರ ಗಾಯ

ಕಾರು - ಬೈಕ್ ನಡುವೆ ಭೀಕರ ಅಪಘಾತ: ತಂದೆ - ಮಗ ಮೃತ್ಯು, ತಾಯಿ - ಮಗನಿಗೆ ಗಂಭೀರ ಗಾಯ

ಚಾಮರಾಜನಗರ: ಬೈಕ್ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ತಂದೆ - ಮಗ ಸ್ಥಳದಲ್ಲೇ ಮೃತಪಟ್ಟು, ತಾಯಿ ಹಾಗೂ ಮಗ ಗಂಭೀರವಾಗಿ ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿಗೇಟಿನಲ್ಲಿ ನಡೆದಿದೆ. 

ಅಪಘಾತದಲ್ಲಿ ನಂಜನಗೂಡು ಮೂಲದ ಶಶಿಕುಮಾರ್ (35), ಮಗ ದರ್ಶನ್(6) ಸ್ಥಳದಲ್ಲೇ ಮೃತಪಟ್ಟರೆ, ಶಶಿಕುಮಾರ್ ಪತ್ನಿ ಚೈತ್ರಾ ಹಾಗೂ ಗಗನ್ (5) ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.


ಮೈಸೂರಿನಿಂದ ಗುಂಡ್ಲುಪೇಟೆಗೆ ಕಡೆ ತೆರಳುತ್ತಿದ್ದ ಕಾರೊಂದು ಪೆಟ್ರೋಲ್ ಹಾಕಲೆಂದು ಏಕಾಏಕಿ ಎಡಕ್ಕೆ ತಿರುಗಿದೆ. ಪರಿಣಾನ ಈ ಅವಘಡ ಉಂಟಾಗಿದೆ ಎನ್ನಲಾಗುತ್ತಿದೆ. ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ರವಾನಿಸಲಾಗಿದೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಬೇಗೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ