-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಪ್ಪಿನಂಗಡಿ: ಮಹಿಳೆಯನ್ನು ಚುಡಾಯಿಸಿ ದಾಂಧಲೆ ನಡೆಸಿದಾತ ಮುಗ್ಗರಿಸಿ ಬಿದ್ದು ಗಾಯ!

ಉಪ್ಪಿನಂಗಡಿ: ಮಹಿಳೆಯನ್ನು ಚುಡಾಯಿಸಿ ದಾಂಧಲೆ ನಡೆಸಿದಾತ ಮುಗ್ಗರಿಸಿ ಬಿದ್ದು ಗಾಯ!

ಉಪ್ಪಿನಂಗಡಿ: ಹೊಟೇಲೊಂದರಲ್ಲಿ ಊಟ ಮಾಡುತ್ತಿದ್ದ ಮಹಿಳೆಯೋರ್ವರ ಮೇಲೆ ಕೈಹಾಕಿ ಚುಡಾಯಿಸಿರುವ ದುಷ್ಕರ್ಮಿಯೋರ್ವನು ಈ ಪ್ರಶ್ನಿಸಿದ ಹೊಟೇಲ್ ಮಾಲಕ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆಗೈದು ದಾಂಧಲೆ ನಡೆಸಿರುವ ಘಟನೆ ಉಪ್ಪಿನಂಗಡಿಯಲ್ಲಿ ಸೋಮವಾರ ನಡೆದಿದೆ. 

ಉಪ್ಪಿನಂಗಡಿ ಬಸ್ ನಿಲ್ದಾಣದ ಪರಿಸರದಲ್ಲಿರುವ ಹೊಟೇಲ್‌ನಲ್ಲಿ ಈ ಘಟನೆ ಸಂಭವಿಸಿದೆ. ವೇಣೂರು ನಿವಾಸಿ ಪ್ರಶಾಂತ್ ಎಂಬಾತ ದಾಂಧಲೆಗೈದಿರುವ ಆರೋಪಿ. ಈತ ನಿನ್ನೆ ಮಧ್ಯಾಹ್ನ ಹೊಟೇಲಿಗೆ ಬಂದಿದ್ದ ಆರೋಪಿ ಪ್ರಶಾಂತ್ ಊಟಕ್ಕೆ ಆರ್ಡರ್ ಕೊಟ್ಟು ಸಮೀಪದ ಕುರ್ಚಿಯಲ್ಲಿ ಕುಳಿತಿದ್ದ ಮಹಿಳಾ ಗ್ರಾಹಕಿಯನ್ನು ಚುಡಾಯಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಹಿಳೆಯು ಹೊಟೇಲ್ ಮಾಲಕರಲ್ಲಿ ಈ ಬಗ್ಗೆ ದೂರಿಕೊಂಡಿದ್ದಾರೆ. 

ಹೊಟೇಲ್ ಮಾಲಕ ಆತನನ್ನು ಹೊಟೇಲಿನಿಂದ ಹೊರ ಕಳುಹಿಸಿದ್ದಾರೆ. ಇದರಿಂದ ಕುಪಿತಗೊಂಡ ಆರೋಪಿ ಹೊಟೇಲಿಗೆ ನುಗ್ಗಿ ಹೊಟೇಲ್ ನ ಒಳಗಿದ್ದವರಿಗೆ ಸೋಡಾ ಬಾಟ್ಲಿಯನ್ನು ಎಸೆಯಲಾರಂಭಿಸಿದ್ದಾನೆ. 

ಈ ವೇಳೆ ಆತ ಹೊಟೇಲ್ ನ ಕುರ್ಚಿಯನ್ನು ಎತ್ತಿ ಎಸೆಯಲೆತ್ನಿಸಿದ ವೇಳೆ ನೆಲಕ್ಕೆ ಮುಗ್ಗರಿಸಿ ಬಿದ್ದದ್ದಾನೆ. ಪರಿಣಾಮವಾಗಿ ಆತನ ಮುಖಕ್ಕೆ ಗಾಯಗಳಾಗಿವೆ. ಆ ವೇಳೆ ಸ್ಥಳೀಯರು ಆತನನ್ನು ಹಿಡಿದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹೊಟೇಲ್ ಮಾಲಕರು ದಾಂಧಲೆ ನಡೆಸಿದ ಪ್ರಶಾಂತ್ ನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.   

Ads on article

Advertise in articles 1

advertising articles 2

Advertise under the article

ಸುರ