-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹಳೆಯಂಗಡಿ: ಮದುವೆ ಮಂಟಪದಿಂದಲೇ ವರ - ವಧು ಪರಾರಿ; ಯಾಕೆ ಗೊತ್ತೇ?

ಹಳೆಯಂಗಡಿ: ಮದುವೆ ಮಂಟಪದಿಂದಲೇ ವರ - ವಧು ಪರಾರಿ; ಯಾಕೆ ಗೊತ್ತೇ?

ಹಳೆಯಂಗಡಿ: ಇನ್ನೇನು ಕೆಲವೇ ಕ್ಷಣಗಳಲ್ಲಿ ವಧುವಿನ ಕತ್ತಿಗೆ ವರ ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಈ ವರ ಏಕಾಏಕಿ ವಧುವಿನೊಂದಿಗೇ ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಮುಲ್ಕಿ ಪೊಲೀಸ್‌ ಠಾಣೆ ವ್ಯಾಪ್ತಿಯ ಪಡುಪಣಂಬೂರು ಬಳಿಯ ಮದುವೆ ಸಭಾಂಗಣವೊಂದರಲ್ಲಿ ನಡೆದಿದೆ.

ತೀರ್ಥಹಳ್ಳಿ ಮೂಲದ 40ರ ಹರೆಯದ ವರ ಶಿವಮೊಗ್ಗ - ಮೂಡುಬಿದಿರೆ ರಸ್ತೆಯಲ್ಲಿ ಸಂಚಾರ ಮಾಡುವ ಖಾಸಗಿ ಬಸ್‌ ಚಾಲಕನಾಗಿದ್ದ. ಈತ ನಗರದ ಸಸಿಹಿತ್ಲು ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದ. ಪರಸ್ಪರ ಪ್ರೀತಿಸಿದ್ದ ಈ ಜೋಡಿ ಇಂದು ಮದುವೆಯಾಗಲು ಸಿದ್ಧತೆ ನಡೆಸಿತ್ತು.

ಆದರೆ ಮದುವೆ ಸಭಾಂಗಣದಲ್ಲಿ ವಿವಾಹ ಶಾಸ್ತ್ರ ನಡೆಯುತ್ತಿರುವಾಗಲೇ ತಾನು ವರನ ಮೊದಲನೇ ಹೆಂಡತಿ ಎಂದೊಬ್ಬ ಮಹಿಳೆ ಅಲ್ಲಿಗೆ ಬಂದಿದ್ದಾರೆ‌. ಆಕೆ ತನ್ನ ಪತಿಯ ಎರಡನೇ ಮದುವೆಯ ಬಗ್ಗೆ ತಗಾದೆ ತೆಗೆದ್ದಾಳೆ. ಈ ವರನಿಗೆ ಈ ಮೊದಲೇ ಮದುವೆಯಾಗಿದ್ದು ಒಂದು ಗಂಡು ಮಗುವಿದೆ ಎಂದು ರಂಪಾಟ ಮಾಡಿದ್ದಾರೆ. 

ಈ ಸಂದರ್ಭ ಸಭಾಂಗಣದ ಹೊರಗಡೆ ವರ ಹಾಗೂ ವಧುವಿನ ಫೋಟೋ ಶೂಟ್ ನಡೆಯುತ್ತಿತ್ತು. ವರನಿಗೆ ಈ ಗಲಾಟೆಯ ಮಾಹಿತಿ ಲಭ್ಯವಾಗಿದೆ. ಆತ ತಕ್ಷಣ ವಧುವಿನ ಮೈಮೇಲಿನ ಚಿನ್ನಾಭರಣ ಸಹಿತ ಕಾರಿನಲ್ಲಿ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವರನ ಕಡೆಯಿಂದ ಕೇವಲ ಐವರು ಮಾತ್ರ ಮದುವೆಗೆ ಬಂದಿದ್ದರು ಎಂದು ಹೇಳಲಾಗಿದೆ.

ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ವಧುವಿನ ಪೋಷಕರು ಘಟನೆಯ ಮೇರೆಗೆ ದೂರು ನೀಡಿದ್ದಾರೆ. ಆದರೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article