-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಾವಿರಾರು ಮಹಿಳೆಯರಿಗೆ ಪಂಗನಾಮ ಹಾಕಿದ್ದ ಖತರ್ನಾಕ್ ಖದೀಮ ಪೊಲೀಸ್ ವಶಕ್ಕೆ

ಸಾವಿರಾರು ಮಹಿಳೆಯರಿಗೆ ಪಂಗನಾಮ ಹಾಕಿದ್ದ ಖತರ್ನಾಕ್ ಖದೀಮ ಪೊಲೀಸ್ ವಶಕ್ಕೆ

ಹೈದರಾಬಾದ್​: ಕಳೆದ 10 ವರ್ಷಗಳಲ್ಲಿ ಸಾವಿರಾರು ಮಹಿಳೆಯರಿಗೆ ಸುಮಾರು 10 ಕೋಟಿ ರೂ.ನಷ್ಟು ವಂಚನೆ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಸೈಬರಾಬಾದ್​​ ಪೊಲೀಸರು ಎರಡು ತಿಂಗಳ ಕಾರ್ಯಾಚರಣೆ ನಡೆಸಿ‌ ಬಂಧಿಸಿದ್ದಾರೆ‌.

ತೆಲಂಗಾಣದ ರಾಜಧಾನಿ ಹೈದರಾಬಾದ್​ನಲ್ಲಿ ಈ ವಂಚನೆ ಪ್ರಕರಣ ಬಯಲಿಗೆ ಬಂದಿದೆ. ಯುವತಿಯರು, ವಿಧವೆಯರು ಸೇರಿದಂತೆ ಸಾವಿರಾರು ಮಹಿಳೆಯರಿಗೆ ಈತ ವಂಚನೆಗೈದಿದ್ದಾನೆ ಎಂಬ ಆರೋಪ‌ ಕೇಳಿಬಂದಿದೆ. 

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಮಚಂದ್ರರಾವ್​​ ಪೇಟಾ ಮೂಲದ ವಂಶಿಕೃಷ್ಣ 2014ರಲ್ಲಿ ಬಿಟೆಕ್​ ಮುಗಿಸಿ ಹೈದರಾಬಾದ್​ಗೆ ಬಂದಿದ್ದನು. ಇಲ್ಲಿ ಉದ್ಯೋಗ ಪಡೆದುಕೊಂಡ ಆತ ಕುದರೆ ರೇಸಿಂಗ್, ಕ್ರಿಕೆಟ್​ ಬೆಟ್ಟಿಂಗ್​​​ನಲ್ಲಿ ಭಾಗಿಯಾಗಿ ಹಣ ಸೋತು ವಿಪರೀತ ಸಾಲ ಮಾಡಿಕೊಂಡಿದ್ದ. ಈ ಸಾಲದ ಹೊರೆಯಿಂದ ಹೊರ ಬರಲು ಆತ ವಂಚನೆ ಮಾಡಲು ತೊಡಗಿದ್ದಾನೆ ಎನ್ನಲಾಗಿದೆ. 

ಈತ ಯುವತಿಯರು, ವಿಧವೆಯರು, ವಿದೇಶದಲ್ಲಿರುವ ಪುರುಷರ ಪತ್ನಿಯರಿಗೆ ವಂಚನೆ ಮಾಡಿದ್ದಾನೆ ಎನ್ನಲಾಗಿದೆ. ಈತ ಕುಕಟ್​ಪಲ್ಲಿ ವೈಬ್ಸ್ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುದುರೆ ರೇಸಿಂಗ್, ಕ್ರಿಕೆಟ್​ ಬೆಟ್ಟಿಂಗ್​​ನಲ್ಲಿ ಭಾಗಿಯಾಗಿದ್ದಾನೆ. ಇದಕ್ಕೂ ಮೊದಲು ಟ್ರಾವೆಲ್​ ಕನ್ಸಲ್ಟೆನ್ಸಿ ಕಚೇರಿಯಲ್ಲಿ ಉದ್ಯೋಗಿಯಾಗಿ ಸೇರಿಕೊಂಡಿದ್ದು, ಕೆಲಸ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ, ಹಣ ಪಡೆದುಕೊಂಡಿದ್ದಾನೆ. ಈ ವೇಳೆ ಬಂಧನಕ್ಕೊಳಗಾಗಿದ್ದ ಆತ, ಜಾಮೀನು ಮೇಲೆ ಹೊರಬಂದಿದ್ದನು.

ಜೈಲಿನಿಂದ ಹೊರಬಂದ ಬಳಿಕ ಗಾಯತ್ರಿ, ಮಾಧುರಿ, ಸ್ವಾತಿಕಾ, ಶ್ವೇತಾ ಮುಂತಾದ ಯುವತಿಯರ ಹೆಸರಿನಲ್ಲಿ ಇನ್​​​​ಸ್ಟಾಗ್ರಾಂ ಖಾತೆ ತೆರೆದಿದ್ದಾನೆ. ಅಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯರಿಗೆ ವಂಚಿಸಲು ಶುರು ಮಾಡಿದ್ದಾನೆ. ಇದರ ಜೊತೆಗೆ ಶಾಸಕ ಶ್ರೀನಿವಾಸ್ ಅಶೋಕ್​ ರ ಫೋಟೋಗಳೊಂದಿಗೆ ನಕಲಿ ಇನ್​​ಸ್ಟಾಗ್ರಾಂ ಖಾತೆ ತೆರೆದಿದ್ದಾನೆ. ಅಲ್ಲದೆ ಅನೇಕ ಯುವತಿಯರ ವಿಶ್ವಾಸಗಳಿಸಿ, ಅವರ ಅಕೌಂಟ್​​ನಿಂದ ಲಕ್ಷ ಲಕ್ಷ ಹಣ ವರ್ಗಾವಣೆ ಮಾಡಿಕೊಂಡು ಕುದುರೆ ಬೆಟ್ಟಿಂಗ್​​ಗೋಸ್ಕರ ಬಳಕೆ ಮಾಡಿಕೊಂಡಿದ್ದಾನೆ.

ಆನ್​ಲೈನ್​ ಮದುವೆ ಸೈಟ್​​ಗಳ ಮೂಲಕ ವಿಧವೆಯರು, ವಿಚ್ಛೇದಿತ ಮಹಿಳೆಯರಿಂದ ದೊಡ್ಡ ದೊಡ್ಡ ಮೊತ್ತದ ಹಣ ವಸೂಲಿ ಮಾಡಿದ್ದಾನೆ. 2016ರಿಂದ ಇಲ್ಲಿಯವರೆಗೆ ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಪಂಗನಾಮ ಹಾಕಿದ್ದಾನೆ. ಮೋಸಕ್ಕೊಳಗಾದ ಕೇವಲ 50-60 ಮಂದಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಮತ್ತೆ 30 ಮಹಿಳೆಯರನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ