-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹಾರ ಬದಲಿಸುವಾಗ ವರನ ಕೈ ತಾಗಿರೋದಕ್ಕೆ ಮುನಿಸಿಕೊಂಡ ವಧು: ಮದುವೆಯೇ ರದ್ದು

ಹಾರ ಬದಲಿಸುವಾಗ ವರನ ಕೈ ತಾಗಿರೋದಕ್ಕೆ ಮುನಿಸಿಕೊಂಡ ವಧು: ಮದುವೆಯೇ ರದ್ದು

ಬೆಳ್ತಂಗಡಿ(ದಕ್ಷಿಣ ಕನ್ನಡ): ಮದುವೆ ನಡೆಯುತ್ತಿದ್ದ ವೇಳೆ ವಧುವಿನ  ಕೊರಳಿಗೆ ವರ ಹಾರ ಹಾಕುತ್ತಿದ್ದಾಗ ಕೈತಾಗಿತೆಂದು ಕೋಪಗೊಂಡು ಹಾರವನ್ನು ಕತ್ತಿನಿಂದೆಸೆದು ಬಿಸಾಡಿ ವಧು ಮದುವೆಯನ್ನೇ ನಿರಾಕರಿಸಿರುವ ವಿಚಿತ್ರ ಘಟನೆಯೊಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನಾರಾವಿಯ ಕಲ್ಯಾಣ ಮಂಟಪವೊಂದರಲ್ಲಿ ಇಂತಹ ವಿಚಿತ್ರ ಘಟನೆಯೊಂದು ನಡೆದಿದೆ. ನಾರಾವಿ ನಿವಾಸಿ ವರನಿಗೆ ಮೂಡುಕೊಣಾಜೆಯ ಯುವತಿಯೊಂದಿಗೆ ವಿವಾಹ ನಡೆಯುತ್ತಿತ್ತು. ಈ ವೇಳೆ ಸಂಪ್ರದಾಯದಂತೆ ವಧುವಿನ ಕೊರಳಿಗೆ ವರನು ಹಾರ ಹಾಕುತ್ತಿದ್ದ‌‌. ಆಗ ವಧುವಿನ ಕೈಗೆ ವರನ ಕೈತಾಗಿತೆಂದು ಕೋಪಗೊಂಡ ವಧು ಹಾರವನ್ನೇ ಕುತ್ತಿಗೆಯಿಂದ ತೆಗೆದು ಬಿಸಾಡಿ ವರನಿಗೆ ಬೈದಿದ್ದಾಳೆ. 

ಪರಿಣಾಮ ಅಲ್ಲಿ ಕೊಂಚ ಗೊಂದಲದ ವಾತಾವರಣ ಉಂಟಾಗಿ ವರನ ಹಾಗೂ ವಧುವಿನ ಕಡೆಯವರ ನಡುವೆ ಜಗಳ ನಡೆದಿದೆ. ತಕ್ಷಣ ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಸಮಾಧಾನ ಪಡಿಸಿದರೂ ವರ ಮದುವೆಯನ್ನು ನಿರಾಕರಿಸಿದ್ದಾನೆ ಎಂದು ತಿಳಿದುಬಂದಿದೆ. ಅಲ್ಲದೆ ಮದುವೆಗೆಂದು ಸುಮಾರು ಸಾಲ ಮಾಡಿದ್ದು ಖರ್ಚಾಗಿರುವ ಎಲ್ಲಾ ಹಣವನ್ನು ಹುಡುಗಿಯ ಕಡೆಯವರೇ ನೀಡಬೇಕು ಎಂದು ಹಠ ಹಿಡಿದಿದ್ದಾನೆ. ಈ ಬಗ್ಗೆ ಎರಡೂ ಕಡೆಯವರನ್ನೂ ಮನವೊಲಿಸಿ ಪ್ರಕರಣವನ್ನು ಸುಖಾಂತ್ಯಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article

ಸುರ