-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುಪ್ರೀಂ ಕೋರ್ಟ್, ಸರಕಾರದ ಆದೇಶಕ್ಕೆ ತಲೆಬಾಗಿ ಅಜಾನ್ ಮೈಕ್ ನಿಲ್ಲಿಸಿದ ಕುದ್ರೋಳಿಯ ಜಾಮಿಯಾ ಮಸೀದಿ

ಸುಪ್ರೀಂ ಕೋರ್ಟ್, ಸರಕಾರದ ಆದೇಶಕ್ಕೆ ತಲೆಬಾಗಿ ಅಜಾನ್ ಮೈಕ್ ನಿಲ್ಲಿಸಿದ ಕುದ್ರೋಳಿಯ ಜಾಮಿಯಾ ಮಸೀದಿ

ಮಂಗಳೂರು: ಸುಪ್ರೀಂ ಕೋರ್ಟ್ ಆದೇಶ ಹಾಗೂ ರಾಜ್ಯ ಸರಕಾರದ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ಕುದ್ರೋಳಿ ಜಾಮಿಯಾ ಮಸೀದಿಯಲ್ಲಿ ಇಂದಿನಿಂದಲೇ ಆಜಾನ್​ ಧ್ವನಿವರ್ಧಕ ಸ್ಥಗಿತಗೊಂಡಿದೆ.

ಕುದ್ರೋಳಿ ಜಾಮಿಯಾ ಮಸೀದಿಯಲ್ಲಿ ಪ್ರಾತಃಕಾಲದ ಆಜಾನ್​ಗೆ ಧ್ವನಿವರ್ಧಕ ಬಳಸುವುದನ್ನು ಸ್ಥಗಿತಗೊಳಿಸಲಾಗಿದೆ. ದಿನದ ಐದು ಬಾರಿಯ ನಮಾಜ್ ಆಜಾನ್ ವೇಳೆಯೂ ಧ್ವನಿವರ್ಧಕ ಬಳಸದಿರಲು ನಿರ್ಧರಿಸಲಾಗಿದೆ ಎಂದು ಕುದ್ರೋಳಿ ಜಾಮಿಯಾ ಮಸೀದಿಯ ಅಧ್ಯಕ್ಷ ಕೆ.ಎಸ್. ಮಹಮ್ಮದ್ ಮಸೂದ್ ಹೇಳಿದ್ದಾರೆ.

ಈ ಬಗ್ಗೆ ಕುದ್ರೋಳಿ ಜಾಮಿಯಾ ಮಸೀದಿಯ ಅಧ್ಯಕ್ಷ ಕೆ.ಎಸ್. ಮಸೂದ್ ಮಾತನಾಡಿ, ಆಜಾನ್ ಮೈಕ್ ಬಳಕೆ ಬಗ್ಗೆ ಸುಪ್ರೀಂಕೋರ್ಟ್​ ನೀಡಿರುವ ತೀರ್ಪಿನ ಆಧಾರದ ಮೇಲೆ ರಾಜ್ಯ ಸರ್ಕಾರವೂ ಮಾರ್ಗಸೂಚಿಯನ್ನು ಹೊರಡಿಸಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ನಾನು ಅಧ್ಯಕ್ಷನಾಗಿರುವ ಕುದ್ರೋಳಿ ಜಾಮೀಯಾ ಮಸೀದಿಯಲ್ಲಿ ಇಂದಿನಿಂದಲೇ ಆಜಾನ್​ಗೆ ಧ್ವನಿವರ್ಧಕ ಬಳಕೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಐದು ಹೊತ್ತಿನ ಸಮಯದಲ್ಲೂ ಕೂಡ ಆಜಾನ್​ಗೆ ಧ್ವನಿವರ್ಧಕವನ್ನು ಬಳಸುವುದಿಲ್ಲ. ಸುಪ್ರೀಂ ಮತ್ತು ಸರ್ಕಾರದ ಆದೇಶಕ್ಕೆ ಗೌರವ ನೀಡಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.








Ads on article

Advertise in articles 1

advertising articles 2

Advertise under the article

ಸುರ