-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಂಟ್ವಾಳ: ಟಿವಿ ನೋಡದಿರು ಎಂದು ಬುದ್ಧಿವಾದ ಹೇಳಿರುವುದರಿಂದ ಮನನೊಂದ ಬಾಲಕ ನೇಣಿಗೆ ಶರಣು

ಬಂಟ್ವಾಳ: ಟಿವಿ ನೋಡದಿರು ಎಂದು ಬುದ್ಧಿವಾದ ಹೇಳಿರುವುದರಿಂದ ಮನನೊಂದ ಬಾಲಕ ನೇಣಿಗೆ ಶರಣು

ಬಂಟ್ವಾಳ: ಟಿವಿ ನೋಡದಿರು ಎಂದು ಬುದ್ಧಿವಾದ ಹೇಳಿರುವುದರಿಂದ ಮನನೊಂದ ಬಾಲಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕಸಬಾ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.

ವಿಟ್ಲ ಕಸಬಾ ಗ್ರಾಮದ ಜೋಗಿಬೆಟ್ಟು ನಿವಾಸಿ ವಾಮನ ಪೂಜಾರಿ ಎಂಬುವರ ಪುತ್ರ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಬಾಲಕ. 

ಬಾಲಕ ಸದ್ಯ 8ನೇ ತರಗತಿಯಿಂದ ಉತ್ತೀರ್ಣಗೊಂಡು ಬೇಸಿಗೆ ರಜೆಯ ಹಿನ್ನೆಲೆ ಮನೆಯಲ್ಲಿದ್ದ. ರವಿವಾರ ಬೆಳಗ್ಗೆ ಮನೆಯಲ್ಲಿ ಬಾಲಕ ಟಿವಿ ನೋಡುತ್ತಿದ್ದ. ಈ ಸಂದರ್ಭ ತಂದೆ ವಾಮನ ಪೂಜಾರಿಯವರು 'ಬೆಳಗ್ಗೆ ಬೆಳಗ್ಗೆ ಯಾಕೆ ಟಿವಿ ನೋಡುತ್ತಿ' ಎಂದು ಬುದ್ಧಿ ಮಾತು ಹೇಳಿದ್ದಾರೆ. ಅವರು ಟಿವಿ ಆಫ್ ಮಾಡಿ ಮನೆಯ ಅಂಗಳದಲ್ಲಿ ಕಟ್ಟಿಗೆ ಕೆಲಸಕ್ಕೆ ಹೋಗಿದ್ದರು. ಆದರೆ ಸ್ವಲ್ಪ ಸಮಯದ ಬಳಿಕ ಮಲಗುವ ಕೋಣೆಗೆ ಒಳಗಡೆಯಿಂದ ಚಿಲಕ ಹಾಕಿರುವುದನ್ನು ಗಮನಿಸಿದ ಆತನ ತಾಯಿ ಗಾಬರಿಗೊಂಡು ಪತಿಯನ್ನು ಕರೆದಿದ್ದಾರೆ.

ಆಗ ಬಂದ ಅವರು ಏನೇ ಮಾಡಿ ಕರೆದರೂ ಒಳಗಿನಿಂದ ಯಾವುದೇ ಪ್ರತ್ಯುತ್ತರ ಬಾರಲಿಲ್ಲ. ಆದ್ದರಿಂದ ಬಾಗಿಲನ್ನು ಒಡೆದು ನೋಡೊದಾಗ ಫ್ಯಾನಿಗೆ ಸೀರೆಯನ್ನು ಕಟ್ಟಿಕೊಂಡು ಆತ್ಮಹತ್ಯೆ ಮಾಡಿದ ಸ್ಥಿತಿಯಲ್ಲಿ ಪುತ್ರ ಪತ್ತೆಯಾಗಿದ್ದಾನೆ. ತಕ್ಷಣ ಬಾಲಕನನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆಂದು ಕರೆತಂದರೂ ಆತ ಅದಾಗಲೇ ಮೃತಪಟ್ಟಿದ್ದ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ