-->
ಮಂಗಳೂರು: ಬಟ್ಟಪಾಡಿ ಸಮುದ್ರದಲ್ಲಿ ಮುಳುಗಿತು 15 ಮಂದಿ ಸಿಬ್ಬಂದಿ ರಕ್ಷಣೆಗೊಂಡ ಸಿರಿಯಾ ದೇಶದ ಹಡಗು!

ಮಂಗಳೂರು: ಬಟ್ಟಪಾಡಿ ಸಮುದ್ರದಲ್ಲಿ ಮುಳುಗಿತು 15 ಮಂದಿ ಸಿಬ್ಬಂದಿ ರಕ್ಷಣೆಗೊಂಡ ಸಿರಿಯಾ ದೇಶದ ಹಡಗು!

ಮಂಗಳೂರು: ಇಲ್ಲಿನ ಅರಬ್ಬಿ ಸಮುದ್ರದಲ್ಲಿ ರಂಧ್ರದಲ್ಲಿ ನೀರು ಒಳನುಗ್ಗಿ ತಾಂತ್ರಿಕ ದೋಷಕ್ಕೊಳಗಾಗಿದ್ದ ಸಿರಿಯಾ ದೇಶದ ಹಡಗು ಇಂದು ಮಂಗಳೂರಿನ ಬಟ್ಟಪಾಡಿ ಸಮೀಪದ ಸಮುದ್ರದಲ್ಲಿ ಮುಳುಗಡೆಗೊಂಡಿತು.

ಎರಡು ದಿನಗಳ ಹಿಂದೆ ಸಿರಿಯಾ ದೇಶದ ಎಂವಿ ಪ್ರಿನ್ಸಸ್ ಮಿರಾಲ್ ಎಂಬ ಈ ಹಡಗು ಚೀನಾ ದೇಶದ ಟಿಯಾಂಜಿನ್ ನಿಂದ ಲೆಬನಾನ್ ಎಂಬಲ್ಲಿಗೆ ಪ್ರಯಾಣ ಬೆಳೆಸುತ್ತಿತ್ತು‌. ಆದರೆ ಈ ಹಡಗು ಮಂಗಳೂರಿನ ಸಮುದ್ರ ತೀರದಲ್ಲಿ ಸಾಗುತ್ತಿದ್ದಂತೆ ಸಣ್ಣ ರಂಧ್ರದಲ್ಲಿ ನೀರು ಒಳನುಗ್ಗಿ ಅಪಾಯಕ್ಕೆ ಸಿಲುಕಿತ್ತು. 

ತಕ್ಷಣ ಮಂಗಳೂರಿನ ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನಲ್ಲಿದ್ದ ಸಿರಿಯಾ ದೇಶದ 15 ಮಂದಿ ಪ್ರಜೆಗಳನ್ನು  ರಕ್ಷಿಸಿದ್ದರು. ಈ ಹಡಗು 8000 ಟನ್ ಉಕ್ಕಿನ ಕಾಯಿಲ್ ಗಳನ್ನು ಹೇರಿಕೊಂಡು ಸಾಗುತ್ತಿತ್ತು. ಆದರೆ ಇದೀಗ ಸಿರಿಯಾ ದೇಶ ಈ ಹಡಗು ಬಟ್ಟಪ್ಪಾಡಿ ಸಮೀಪದ ಸಮುದ್ರದಲ್ಲಿ ಮುಳುಗಡೆಯಾಗಿದೆ.

ಹಡಗು ಮುಳುಗಡೆಗೊಂಡ ವಿಚಾರದಲ್ಲಿ ದ.ಕ. ಜಿಲ್ಲಾಡಳಿತವು ಕೋಸ್ಟ್ ಗಾರ್ಡ್ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹಡಗಿನಿಂದ OIL SPILL ಆಗದಂತೆ ತಡೆಗಟ್ಟಲು, ಫರ್ನಸ್ ಆಯಿಲ್ ಮತ್ತು ಇಂಜಿನ್ ಆಯಿಲ್ ಹೊರತೆಗೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ  ಕೋಸ್ಟ್ ಗಾರ್ಡ್ ಡಿಐಜಿಗೆ ಸೂಚಿಸಲಾಗಿದೆ. 

ಅಲ್ಲದೆ ಈ ಹಡಗಿನ ಸುತ್ತಲೂ ಮೀನುಗಾರಿಕೆ ನಡೆಸದಂತೆ ನೋಡಿಕೊಳ್ಳಲು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಲಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರಿಗೆ ಕಾಲ ಕಾಲಕ್ಕೆ ಸಮುದ್ರದ ನೀರಿನ ಗುಣಮಾಪನ ಮಾಡಲು ನಿರ್ದೇಶಿಸಲಾಗಿದೆ. ಯಾವುದೇ ರೀತಿಯಲ್ಲಿ oil Spill ಆದಲ್ಲಿ ನದಿಗೆ ಸೇರದಂತೆ ಸೂಕ್ತ ವ್ಯವಸ್ಥೆ ಮಾಡುವಂತೆ ಕೋಸ್ಟ್ ಗಾರ್ಡ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article