-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಓರ್ವ ಕೊಲೆಯ ಹಿಂದಿದ್ದರು 16 ಮಂದಿ: 14 ಮಂದಿ ಅರೆಸ್ಟ್, ಮತ್ತಿಬ್ಬರ ಪತ್ತೆಗೆ ಪೊಲೀಸ್ ಕಾರ್ಯಾಚರಣೆ

ಓರ್ವ ಕೊಲೆಯ ಹಿಂದಿದ್ದರು 16 ಮಂದಿ: 14 ಮಂದಿ ಅರೆಸ್ಟ್, ಮತ್ತಿಬ್ಬರ ಪತ್ತೆಗೆ ಪೊಲೀಸ್ ಕಾರ್ಯಾಚರಣೆ

ಕೋಲಾರ: ಜಿಲ್ಲೆಯ ನಗರಸಭೆಯ ಸದಸ್ಯನೋರ್ವನ ಹತ್ಯೆಯ ಹಿಂದೆ 16 ಮಂದಿ ದುಷ್ಕರ್ಮಿಗಳಿದ್ದಾರೆ ಎಂದು ಪೊಲೀಸ್ ತಂಡ ಪತ್ತೆ ಮಾಡಿದೆ. ಸದ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ಕೋಲಾರದ ಮುಳಬಾಗಿಲು ಪಟ್ಟಣದ ನಗರಸಭೆಯ ಸದಸ್ಯ ಜಗನ್ಮೋಹನ ರೆಡ್ಡಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಜೂನ್ 7ರಂದು ಈ ಹತ್ಯೆ ಮಾಡಲಾಗಿತ್ತು. ಇದೀಗ ಈ ಕೊಲೆಗೆ ಸಂಬಂಧಿಸಿದಂತೆ ಬಾಲಾಜಿ ಸಿಂಗ್, ರೋಹಿತ್ ಕುಮಾರ್, ಮನೋಜ್, ಧನು, ಜಗನ್, ಅಭಿನಂದನ್, ಧನಂಜಯ್, ಮಹೇಶ್ ನವೀನ್ ಸೇರಿದಂತೆ 14ಮಂದಿಯನ್ನು ಬಂಧಿಸಲಾಗಿದೆ. ಕೊಲೆ ಕೃತ್ಯ ಎಸಗಿರುವ ಹಾಗೂ ಸಹಕಾರ ನೀಡಿರುವ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ.

ಪೊಲೀಸರು ನಾಲ್ಕು ತಂಡಗಳಾಗಿ ಕಾರ್ಯಾಚರಣೆ ನಡೆಸಿ ಕುಪ್ಪಂ, ಮೈಸೂರು, ಗೋವಾ, ಮಹಾರಾಷ್ಟ್ರ,  ವಿಜಯವಾಡಗಳಲ್ಲಿ ಅಡಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ‌.

Ads on article

Advertise in articles 1

advertising articles 2

Advertise under the article

ಸುರ