-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಭಯೋತ್ಪಾದನ ನಿಗ್ರಹ ತಂಡದಲ್ಲಿ ಕರ್ತವ್ಯಕ್ಕೆ ಹಾಜರಾದ 35 ಸಿಬ್ಬಂದಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಭಯೋತ್ಪಾದನ ನಿಗ್ರಹ ತಂಡದಲ್ಲಿ ಕರ್ತವ್ಯಕ್ಕೆ ಹಾಜರಾದ 35 ಸಿಬ್ಬಂದಿ

ಮಂಗಳೂರು: ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಲೆಂದು ಆಂತರಿಕ ಭದ್ರತಾ ವಿಭಾಗದಡಿ (ಐಎಸ್‌ಡಿ) ನಗರ ಭಯೋತ್ಪಾದನಾ ನಿಗ್ರಹ ತಂಡದಲ್ಲಿ ಕರ್ತವ್ಯ ನಿರ್ವಹಿಸಲು 35 ಮಂದಿರುವ ತಂಡ ಸಜ್ಜಾಗಿದೆ.

ಈ ತಂಡವು 2 ತಿಂಗಳುಗಳ ಕಾಲ ಬೆಂಗಳೂರಿನ ಕೂಡ್ಲುವಿನ ಸೆಂಟರ್‌ ಫಾರ್‌ ಕೌಂಟರ್‌ ಟೆರರಿಸಂ (ಸಿಸಿಟಿ)ನಲ್ಲಿ ತರಬೇತಿ ಮುಗಿಸಿದ್ದು, ಇದೀಗ ಮಂಗಳೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗಿದೆ. ಮಂಗಳೂರು ಪೊಲೀಸ್‌ ಕಮಿಷನರ್ ಎನ್‌. ಶಶಿಕುಮಾರ್‌, ಡಿಸಿಪಿಗಳಾದ ಹರಿರಾಂ ಶಂಕರ್‌ ಮತ್ತು ದಿನೇಶ್‌ ಕುಮಾರ್‌ ಹಾಗೂ ತಂಡದ ಮುಖ್ಯಸ್ಥ ಸುಬ್ರಹ್ಮಣ್ಯ ಎಂ. ಹಾಗೂ ಹಿರಿಯ ಅಧಿಕಾರಿಗಳ‌ ಸಮ್ಮುಖ ತಂಡವು ಗೌರವ ರಕ್ಷೆ ಸಲ್ಲಿಸಿತು.

ತಲಾ 15 ಮಂದಿಯನ್ನು ಒಳಗೊಂಡ ಈ ಎರಡು ತಂಡಗಳು ಕರ್ತವ್ಯ ನಿರ್ವಹಿಸುತ್ತದೆ. ರಜೆಯಲ್ಲಿರುವಾಗ ಕರ್ತವ್ಯ ನಿರ್ವಹಣೆಗೆಂದು ಐವರು ಹೆಚ್ಚುವರಿ ಸಿಬ್ಬಂದಿ ಇರುತ್ತಾರೆ. ಇವರಿಗೆ ಪ್ರತ್ಯೇಕ ಸಮವಸ್ತ್ರ ಕೂಡ ಇರಲಿದೆ.

Ads on article

Advertise in articles 1

advertising articles 2

Advertise under the article

ಸುರ