-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ನೂಪರ್ ಶರ್ಮಾ ಗೆ ಬೆಂಬಲ ವ್ಯಕ್ತಪಡಿಸಿದವನ ರುಂಡ ಕತ್ತರಿಸಿದ ದುಷ್ಕರ್ಮಿಗಳು; ಪ್ರಧಾನಿ ಮೋದಿಯವರಿಗೂ ಜೀವ ಬೆದರಿಕೆ!

ಮಂಗಳೂರು: ನೂಪರ್ ಶರ್ಮಾ ಗೆ ಬೆಂಬಲ ವ್ಯಕ್ತಪಡಿಸಿದವನ ರುಂಡ ಕತ್ತರಿಸಿದ ದುಷ್ಕರ್ಮಿಗಳು; ಪ್ರಧಾನಿ ಮೋದಿಯವರಿಗೂ ಜೀವ ಬೆದರಿಕೆ!

ರಾಜಸ್ಥಾನ: ತಮ್ಮ ವಿವಾದಿತ ಹೇಳಿಕೆಯಿಂದ ದೇಶ - ವಿದೇಶದಲ್ಲೂ   ಹಲವರ ಕೆಂಗಣ್ಣಿಗೆ ಗುರಿಯಾಗಿದ್ದ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿರುವ ಯುವಕನ ರುಂಡವನ್ನೇ ಕಡಿದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದಾರೆ. ಈ ಯುವಕ ನೂಪುರ್ ಶರ್ಮಾ ಪರವಹಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ. ಅದರ ಬೆನ್ನಲ್ಲೇ ಈ ರೀತಿಯಲ್ಲಿ ಆತ ಬಲಿಯಾಗಿದ್ದಾನೆ.

ದುಷ್ಕರ್ಮಿಗಳಿಬ್ಬರು ಈ ಯುವಕನನ್ನು ರಾಜಸ್ಥಾನದ ಉದಯಪುರದ ಮಲ್ಡಾಸ್ ಸ್ಟ್ರೀಟ್ ನಲ್ಲಿ ಹತ್ಯೆ ಮಾಡಿದ್ದಾರೆ. ಈ ಕೊಲೆಯ ದೃಶ್ಯದ ವೀಡಿಯೋವನ್ನು ವೈರಲ್ ಮಾಡಿರುವ ದುಷ್ಕರ್ಮಿಗಳು ಪ್ರಧಾನಿ ಮೋದಿಯವರನ್ನು ಕೊಲೆ ಮಾಡುವ ಬೆದರಿಕೆಯೊಡ್ಡಿದ್ದಾರೆ.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಿಎಂ ಗೆಹ್ಲೊಟ್ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿರುವ ಅವರು ಈ ಭಯಾನಕ ಕೃತ್ಯದ ವೀಡಿಯೋ ವೈರಲ್ ಮಾಡದಂತೆ ಕೋರಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ