ಮಂಗಳೂರು: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ನಿನ್ನೆ ರಾತ್ರಿ ವ್ಯಕ್ತಿಯೋರ್ವರು ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟಿರುವ ಘಟನೆ ಕೊಲ್ನಾಡು ಕೆ.ಎಸ್.ನಗರದ ಅಂಬಿಕಾ ಸ್ಟೋರ್ ಬಳಿ  ಸರಕಾರಿ ಬಾವಿ ಬಳಿ ನಡೆದಿದೆ.
ಕೆ.ಎಸ್.ರಾವ್ ನಗರದ ಪೊಲೀಸ್ ಕ್ವಾಟರ್ಸ್ ನಿವಾಸಿ ಸುನಿಲ್(46) ಮೃತಪಟ್ಟ ವ್ಯಕ್ತಿ
ಈ ಘಟನೆ ನಿನ್ನೆ ರಾತ್ರಿ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದಿರುವ ಮುಲ್ಕಿ ಪೊಲೀಸರು ಮೃತದೇಹದ ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ.
 
   
 
 
 
 
 
 
 
 
 
 
 
 
 
 
 
 
 
 
