-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುಳ್ಯ: ಮತ್ತೆ ಕಂಪಿಸಿದ ಭೂಮಿ, ಭೀತಿಗೊಂಡು ಮನೆಗಳಿಂದ ಹೊರ ಬಂದ ಜನತೆ

ಸುಳ್ಯ: ಮತ್ತೆ ಕಂಪಿಸಿದ ಭೂಮಿ, ಭೀತಿಗೊಂಡು ಮನೆಗಳಿಂದ ಹೊರ ಬಂದ ಜನತೆ

ಮಂಗಳೂರು: ಜೂ.25ರಂದು ದ.ಕ.ಜಿಲ್ಲೆಯ ಸುಳ್ಯ ಕೆಲ ಪ್ರದೇಶ ಹಾಗೂ ಕೊಡಗು ಗಡಿಭಾಗದಲ್ಲಿ ಭೂಕಂಪನದ ಅನುಭವವಾಗಿತ್ತು. ಇದೀಗ ಎರಡು ದಿನಗಳ ಬಳಿಕ ಇಂದು ಮತ್ತೆ ಸುಳ್ಯ ತಾಲೂಕಿನ ಜನತೆಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಸುಳ್ಯ, ಸಂಪಾಜೆ, ಗೂನಡ್ಕ, ಗುತ್ತಿಗಾರು ಸೇರಿದಂತೆ ವಿವಿಧ ಕಡೆಗಳಲ್ಲಿ ಇಂದು ಬೆಳಗ್ಗೆ 7.44 - 7.45 ರ ಕಾಲಾವಧಿಯಲ್ಲಿ ಭೂಮಿ ಲಘುವಾಗಿ ಕಂಪಿಸಿದೆ. ವಿಚಿತ್ರವಾದ ಭಾರೀ ಶಬ್ದದೊಂದಿಗೆ ಕಂಪನದ ಅನುಭವವಾಗಿದೆ. ಪರಿಣಾಮ ಜನರು ಆತಂಕಿತರಾಗಿ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಭೂಕಂಪನದ ಸಂದರ್ಭದಲ್ಲಿ ಪಾತ್ರೆಗಳು, ಪೀಠೋಪಕರಣಗಳು ಅಲುಗಾಡಿವೆ. ಮನೆ ಮೇಲ್ಛಾವಣಿಯ ರೂಫಿಂಗ್ ಶೀಟ್ ಗಳು ಕಂಪನಗೊಂಡಿದೆ.  

Ads on article

Advertise in articles 1

advertising articles 2

Advertise under the article