-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮದುವೆ ಸಮಾರಂಭದಲ್ಲಿ ಹಾರಿಸಿದ ಗುಂಡು ನೇರವಾಗಿ ಸೈನಿಕನ ಎದೆ ಸೀಳಿತು: ಮದುಮಗ ವಿರುದ್ಧ ದೂರು ದಾಖಲು

ಮದುವೆ ಸಮಾರಂಭದಲ್ಲಿ ಹಾರಿಸಿದ ಗುಂಡು ನೇರವಾಗಿ ಸೈನಿಕನ ಎದೆ ಸೀಳಿತು: ಮದುಮಗ ವಿರುದ್ಧ ದೂರು ದಾಖಲು

ಲಖನೌ: ಉತ್ತರ ಭಾರತೀಯರಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಸಂಭ್ರಮಾಚರಣೆ ಮಾಡಲು ಬಂದೂಕಿನಿಂದ ಗುಂಡು ಹಾರಿಸುವುದು ಸಾಮಾನ್ಯ. ಆದರೆ ಇಂತಹ ಆಚರಣೆಗಳು ಕೆಲವೊಮ್ಮೆ ದುರಂತದಲ್ಲಿ ಕೊನೆಗೊಳ್ಳುವುದು ವಿಪರ್ಯಾಸವೇ ಸರಿ. 

ಇದೀಗ ಮದುವೆ ಸಂಭ್ರಮದಲ್ಲಿದ್ದವರಿಗೆ ಮದುಮಗನೇ ಶಾಕ್​​ ನೀಡಿರುವ ಘಟನೆಯೊಂದು ನಡೆದಿದೆ. ಈ ಮದುವೆ ಸಮಾರಂಭದಲ್ಲಿ ಮದುಮಗನಿಂದಲೇ ಅಪರಾಧ ಕೃತ್ಯ ನಡೆದುಹೋಗಿದೆ. ಸಂತೋಷಕ್ಕಾಗಿ ಹಾರಿಸಿರುವ ಗುಂಡೊಂದು ನೇರವಾಗಿ ಆತನ ಸ್ನೇಹಿತ ಎದೆಯನ್ನು ಸೀಳಿದೆ. ಪರಿಣಾಮ ಆತ ಮೃತಪಟ್ಟಿದ್ದಾನೆ.

ಉತ್ತರ ಪ್ರದೇಶದ ಸೊನ್ ಭದ್ರ ಜಿಲ್ಲೆಯ ಬ್ರಹ್ಮಾನಗರದಲ್ಲಿ ಮದುವೆ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಮದುಮಗ ಮನೀಶ್​ ಮಧೇಶಿಯಾ ಸುತ್ತಲೂ ಸ್ನೇಹಿತರು ಸೇರಿದಂತೆ ಹಲವಾರು ಮಂದಿ ನಿಂತಿದ್ದರು. ಈ ವೇಳೆ ಮದುಮಗ ಖುಷಿಗಾಗಿ ಗುಂಡು ಹಾರಿಸಿದ್ದಾನೆ. ಈ ಗುಂಡು ಅಲ್ಲೇ ನಿಂತಿದ್ದ ಆತನ ಸ್ನೇಹಿತ ಸೈನಿಕ ಬಾಬು ಲಾಲ್​ ಯಾದವ್​ ನಿಗೆ ತಗುಲಿದೆ. ದುರಂತವೆಂದರೆ ಈ ಗನ್​ ಕೂಡ ಮೃತ ಯಾದವ್​​ನದ್ದೇ ಆಗಿದೆ. 

ತಕ್ಷಣ ಯಾದವ್​ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸ್​ ಅಧಿಕಾರಿ ಅಮರೇಂದ್ರ ಪ್ರತಾಪ್​ ಸಿಂಗ್​ ತಿಳಿಸಿದ್ದಾರೆ. ಇದೀಗ ವರನ ವಿರುದ್ಧ ದೂರು ದಾಖಲಾಗಿದೆ.

ಯಾವುದೇ ಸಭೆ ಸಮಾರಂಭಗಳಲ್ಲಿ ಈ ರೀತಿ ಬಂದೂಕು ಬಳಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಒಂದು ವೇಳೆ ಬಳಸಿದರೂ ಅನುಮತಿ ಪಡೆದಿರಬೇಕಿದೆ. ಇದು ಗೊತ್ತಿದ್ದರೂ ಪದೇ ಪದೇ ಇಂತಹ ಅಚಾತುರ್ಯ ಘಟನೆಗಳು ನಡೆಯುತ್ತಲೇ ಇದೆ.

Ads on article

Advertise in articles 1

advertising articles 2

Advertise under the article

ಸುರ