-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Mangalore- ಹಿಜಾಬ್ ಬೇಕೆನ್ನುವವರು ವಿದೇಶಕ್ಕೊಮ್ಮೆ ಹೋಗಿ ಬರಲಿ: ಯು.ಟಿ.ಖಾದರ್

Mangalore- ಹಿಜಾಬ್ ಬೇಕೆನ್ನುವವರು ವಿದೇಶಕ್ಕೊಮ್ಮೆ ಹೋಗಿ ಬರಲಿ: ಯು.ಟಿ.ಖಾದರ್

ಮಂಗಳೂರು: ಹಿಜಾಬ್ ಬೇಕೆನ್ನುವ ವಿದ್ಯಾರ್ಥಿನಿಯರು ವಿದೇಶಕ್ಕೊಮ್ಮೆ ಹೋಗಿಬರಲಿ. ಪಾಕಿಸ್ಥಾನ, ಸೌದಿಯಂತಹ ದೇಶಗಳಿಗೆ ಹೋದರೆ ನಮ್ಮ‌ ದೇಶದ ಮಹತ್ವ ತಿಳಿಯುತ್ತದೆ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹೇಳಿದರು.




ಹಿಜಬ್ ವಿವಾದ ವಿಚಾರವಾಗಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು,‌ ಇಲ್ಲಿ ಬೇಕಾದ ಹಾಗೆ ಮಾತನಾಡಬಹುದು, ಜಿಲ್ಲಾಧಿಕಾರಿಯವರನ್ನು ಭೇಟಿಯಾಗಬಹುದು, ಪ್ರೆಸ್ ಮೀಟ್ ಎಲ್ಲವನ್ನೂ ಮಾಡಬಹುದು. ಆದರೆ ದನ್ನೇ ವಿದೇಶಕ್ಕೆ ಹೋಗಿ ಮಾತನಾಡಲಿ ಆಗ ತಿಳಿಯುತ್ತದೆ ಎಂದು ಹೇಳಿದರು.

ಇಲ್ಲಿ‌ ಹುಲಿಯ ಹಾಗೆ ಇದ್ದವರು, ಅಲ್ಲಿ ಬೆಕ್ಕಿನ ತರಹ ಆಗುತ್ತಾರೆ.‌ ನಮ್ಮ ದೇಶದ ಕಾನೂನು ನೀಡಿರುವ ಅವಕಾಶದ ಮಹತ್ವ ತಿಳಿಯುತ್ತದೆ. ಇಲ್ಲಿ ದೊರಕುವವ ಸ್ವಾತಂತ್ರ್ಯದ ಅರಿವಾಗುತ್ತದೆ ಎಂದು ಹಿಜಾಬ್ ವಿದ್ಯಾರ್ಥಿನಿಯರಿಗೆ ಯು.ಟಿ.ಖಾದರ್ ಸಲಹೆ ನೀಡಿದರು.

Ads on article

Advertise in articles 1

advertising articles 2

Advertise under the article

ಸುರ