-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Mangaluru- ಮಳಲಿ‌ ಮಸೀದಿ ವಿವಾದ ಪ್ರಕರಣ: ಜೂ‌.17ಕ್ಕೆ ವಿಚಾರಣೆ ಮುಂದೂಡಿಕೆ

Mangaluru- ಮಳಲಿ‌ ಮಸೀದಿ ವಿವಾದ ಪ್ರಕರಣ: ಜೂ‌.17ಕ್ಕೆ ವಿಚಾರಣೆ ಮುಂದೂಡಿಕೆ

ಮಂಗಳೂರು: ನಗರದ ಹೊರವಲಯದಲ್ಲಿರುವ ಮಳಲಿ ಮಸೀದಿಯ ನವೀಕರಣ ಸಂದರ್ಭ ದೇಗುಲ ಶೈಲಿಯ ರಚನೆ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಹಾಗೂ ಸಿವಿಲ್ ನ್ಯಾಯಾಲಯದಲ್ಲಿ ಜೂ.  17 ಕ್ಕೆ ಮುಂದೂಡಿದೆ.

 ಮಸೀದಿ ಆಡಳಿತ ಮಂಡಳಿಯ ಪರ ನ್ಯಾಯವಾದಿ ಎಂಪಿ ಶೆಣೈ ಇಂದು ವಾದ ಮಂಡಿಸಿ 'ವಿಹೆಚ್ ಪಿ ಸಲ್ಲಿಸಿದ ಅರ್ಜಿಯು ಸಿವಿಲ್ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಅದು ವಕ್ಫ್ ಕೋರ್ಟ್ ನಲ್ಲಿ ವಿಚಾರಣೆಯಾಗಬೇಕಾಗಿದೆ. ಅಲ್ಲದೆ ವಿಹೆಚ್ ಪಿ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ವಾದ ಮಂಡಿಸಿದರು. ಈ ಬಗ್ಗೆ ಇತ್ತಂಡಗಳ ಪರ ವಕೀಲರೂ ವಾದ - ವಿವಾದ ಮಂಡಿಸಿದರು. ವಾದ - ವಿವಾದವನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಜೂ.17 ಕ್ಕೆ ಮುಂದೂಡಿದ್ದಾರೆ.

ಈ ವಿಚಾರದಲ್ಲಿ ನಿನ್ನೆಯಷ್ಟೆ ಹೈಕೋರ್ಟ್ ಜಿಲ್ಲಾ ಸಿವಿಲ್ ನ್ಯಾಯಾಲಯ ವಿಚಾರಣೆಯನ್ನಷ್ಟೇ ಮಾಡಬಹುದು. ಆದರೆ ಯಾವುದೇ ಕಾರಣಕ್ಕೂ ಆದೇಶ ನೀಡುವಂತಿಲ್ಲ ಎಂದು ಮಂಗಳೂರಿನ ಮೂರನೇ ಹೆಚ್ಚುವರಿ ಹಾಗೂ ಸಿವಿಲ್ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

Ads on article

Advertise in articles 1

advertising articles 2

Advertise under the article