-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು ವಿವಿ ಕಾಲೇಜು ತರಗತಿಯಲ್ಲಿ ಸಾವರ್ಕರ್ ಫೋಟೋ ಹಾಕಿರುವ ವಿವಾದದ ಹಿನ್ನೆಲೆ ಹಲ್ಲೆ ಪ್ರಕರಣ: ಕಾಲೇಜಿಗೆ ಮುತ್ತಿಗೆ

ಮಂಗಳೂರು ವಿವಿ ಕಾಲೇಜು ತರಗತಿಯಲ್ಲಿ ಸಾವರ್ಕರ್ ಫೋಟೋ ಹಾಕಿರುವ ವಿವಾದದ ಹಿನ್ನೆಲೆ ಹಲ್ಲೆ ಪ್ರಕರಣ: ಕಾಲೇಜಿಗೆ ಮುತ್ತಿಗೆ

ಮಂಗಳೂರು: ನಗರದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದದ ಮಧ್ಯೆಯೇ ತರಗತಿಯಲ್ಲಿ ಸಾವರ್ಕರ್ ಫೋಟೋ ಹಾಕಿರುವ ವಿವಾದವೊಂದು ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿತ್ತು. ಇಂದು ಮಧ್ಯಾಹ್ನ ನಡೆದ ಈ  ಘರ್ಷಣೆಯಲ್ಲಿ ಎರಡೂ ತಂಡಗಳ ನಡುವೆ ಕೈ - ಕೈ ಮಿಲಾಯಿಸುವಿಕೆ ನಡೆದು ವಿದ್ಯಾರ್ಥಿಗಳು  ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಸಮಾನ ಮನಸ್ಕ ವಿದ್ಯಾರ್ಥಿ ಘಟಕ ಏಕಾಏಕಿಯಾಗಿ ಕಾಲೇಜಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ.

ಕಾಲೇಜು ಗೇಟ್ ಬಾಗಿಲ ಬಳಿ ಬಂದ ಪ್ರತಿಭಟನಾ ನಿರತರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ‌‌. ಪರಿಣಾಮ ಪ್ರತಿಭಟನಾಕಾರರು ಅಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಎಬಿವಿಪಿ ಹಾಗೂ ಕಾಲೇಜು ಪ್ರಾಂಶುಪಾಲೆ ವಿರುದ್ಧ ಘೋಷಣೆ ಕೂಗಲಾಯಿತು.

ಮಂಗಳೂರು ವಿವಿ ಕಾಲೇಜಿನಲ್ಲಿ 3-4 ದಿನಗಳ ಹಿಂದೆ ತರಗತಿಯಲ್ಲಿ ವಿದ್ಯಾರ್ಥಿಯೊಬ್ಬನು ಸಾವರ್ಕರ್ ಫೋಟೊವನ್ನು ಹಾಕಿದ್ದಾನೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ತಂಡವೊಂದು ಕಾಲೇಜು ಪ್ರಾಂಶುಪಾಲರಿಗೆ ಮನವಿ ಮಾಡಿದೆ. ಆದರೆ ಈ ಬಗ್ಗೆ ಅವರು ಕ್ರಮ ಕೈಗೊಳ್ಳುವ ಬದಲು 'ದೇಶದ್ರೋಹಿ' ಸಾವರ್ಕರ್ ಎಂಬ ಪದವನ್ನು ಉಲ್ಲೇಖಿಸಿರುವ ಬಗ್ಗೆ ಮನವಿ ನೀಡಿರುವ ವಿದ್ಯಾರ್ಥಿಗಳ ಮೇಲೆಯೇ ನೋಟಿಸ್ ಜಾರಿ ಮಾಡಿದ್ದರು. ಅಲ್ಲದೆ ಇಂದು ಮೂವರು ವಿದ್ಯಾರ್ಥಿಗಳ ಮೇಲೆ 40 ಎಬಿವಿಪಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಈ ಪ್ರತಿಭಟನೆ ನಡೆಸಲಾಗಿದೆ.

ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳದ ಪ್ರಾಂಶುಪಾಲರನ್ನು ಅಮಾನತು ಮಾಡಬೇಕು. ಒಂದು ವಾರದೊಳಗೆ ಘರ್ಷಣೆಗೆ ಕಾರಣರಾದ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

Ads on article

Advertise in articles 1

advertising articles 2

Advertise under the article

ಸುರ