-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾರ್ಕಳ: ವಿಕಲಚೇತನ ಪುತ್ರನನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಾರ್ಕಳ: ವಿಕಲಚೇತನ ಪುತ್ರನನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಾರ್ಕಳ: ವಿಕಲಚೇತನ ಪುತ್ರನನ್ನು ಬಾವಿಗೆ ತಳ್ಳಿ ಹತ್ಯೆಗೈದ ತಂದೆಯೋರ್ವನು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೇರ್ವಾಶೆಯಲ್ಲಿ‌ ನಡೆದಿದೆ.

ಪಾಚರಬೆಟ್ಟು ಕೃಷ್ಣ ಪೂಜಾರಿ, ಅವರ ಪುತ್ರ ದೀಪೇಶ್(26) ಮೃತಪಟ್ಟ ದುರ್ದೈವಿಗಳು.

ಕೃಷ್ಣ ಪೂಜಾರಿಯವರ ಪತ್ನಿ ಅನಾರೋಗ್ಯ ಪೀಡಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಚಿಕಿತ್ಸೆಗಾಗಿ ಮುಂಬೈಗೆ ತೆರಳಿದ್ದರು. ಈ ವೇಳೆ ತಂದೆ ಹಾಗೂ ಮಗ ಇಬ್ಬರೇ ಇದ್ದರು. ಪುತ್ರ ವಿಕಲಚೇತನನೆಂಬ ವಿಚಾರದಲ್ಲಿ ಮನನೊಂದಿದ್ದ ಕೃಷ್ಣ ಪೂಜಾರಿ ಮೊದಲಿಗೆ ಆತನನ್ನು ಬಾವಿಗೆ ತಳ್ಳಿದ್ದಾರೆ. ಆ ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ.

Ads on article

Advertise in articles 1

advertising articles 2

Advertise under the article