-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Sulya:-ಸುಳ್ಯದ ಕಸಬಾ ಎಂಬಲ್ಲಿ ಶೂಟ್ಔಟ್.. ಯುವಕ ಪ್ರಾಣಾಪಾಯದಿಂದ ಪಾರು..!

Sulya:-ಸುಳ್ಯದ ಕಸಬಾ ಎಂಬಲ್ಲಿ ಶೂಟ್ಔಟ್.. ಯುವಕ ಪ್ರಾಣಾಪಾಯದಿಂದ ಪಾರು..!

ಸುಳ್ಯ

ಸುಳ್ಯ ತಾಲೂಕಿನ ಕಸಬಾ ಎಂಬಲ್ಲಿ ನಿನ್ನೆ ರಾತ್ರಿ ಗಂಟೆ 10:15ರ ಸುಮಾರಿಗೆ ಯುವಕನೊಬ್ಬನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದ್ದು, ಗುಂಡು ಗುರಿ ತಪ್ಪಿದ ಹಿನ್ನೆಲೆಯಲ್ಲಿ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸುಳ್ಯ ತಾಲೂಕಿನ ಕಸಬಾ ಗ್ರಾಮದ ಜಯನಗರ ನಿವಾಸಿ ಸಾಯಿ ಎಂಬವರು
ಸುಳ್ಯದ ಕಸಬಾ ಗ್ರಾಮದ ಜ್ಯೋತಿ ಸರ್ಕಲ್ ಹತ್ತಿರ ತನ್ನ ಕ್ರೆಟ್ಟಾ ಕಾರನ್ನು ನಿಲ್ಲಿಸಿ ತನ್ನ ತಂಗಿಯ ಮನೆಗೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿ ಬಂದ ಅವರು ತನ್ನ ಕಾರನ್ನು ಏರುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಸ್ಕಾರ್ಪಿಯೋ ವಾಹನದಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಸಾಯಿಯವರ ಕಡೆಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡು ಅದೃಷ್ಟವಶಾತ್ ಸಾಯಿಗೆ ತಾಗದೆ ಅವರ ಕಾರಿಗೆ ತಾಗಿ ಕಾರು ಜಖಂಗೊಂಡಿದೆ. ಗುಂಡಿನಿಂದ ಹಾರಿದ ಪೀಸ್ ಒಂದು ತಾಗಿದ ಪರಿಣಾಮ ಸಾಯಿಯವರ ಹೊಟ್ಟೆಯ ಸಮೀಪಕ್ಕೆ ಗಾಯವಾಗಿದೆ.ಸಾಯಿರವರು ಈಗ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಂಡು ಹಾರಿಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article