-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಶಿರ್ವ: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ನಲ್ಲಿ ಲಕ್ಷಾಂತರ ರೂ‌. ನೆಕ್ಲೆಸ್ ಕದ್ದ ಖದೀಮರು

ಶಿರ್ವ: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ನಲ್ಲಿ ಲಕ್ಷಾಂತರ ರೂ‌. ನೆಕ್ಲೆಸ್ ಕದ್ದ ಖದೀಮರು

ಮಂಗಳೂರು: ಜ್ಯುವೆಲ್ಲರಿ ಶಾಪ್ ಗೆ ಗ್ರಾಹಕರ ಸೋಗಿನಲ್ಲಿ ಬಂದಿರುವ ಅಪರಿಚಿತರಿಬ್ಬರು ಲಕ್ಷಾಂತರ ರೂ. ಮೌಲ್ಯದ ನೆಕ್ಲೆಸ್ ನೊಂದಿಗೆ ಪರಾರಿಯಾಗಿರುವ ಘಟನೆ ನಗರದ ಶಿರ್ವದಲ್ಲಿ ನಡೆದಿದೆ.

ಕುತ್ಯಾರುವಿನ ಕೆ.ವಿವೇಕಾನಂದ‌ ಆಚಾರ್ಯ ಅವರ ಶಿರ್ವ ಪೇಟೆಯಲ್ಲಿರುವ ಕೃಪಾ ಜ್ಯುವೆಲ್ಲರ್ಸ್ ನಲ್ಲಿ ಜೂ.6ರಂದು ಈ ಘಟನೆ ನಡೆದಿದೆ. ಅಪರಿಚಿತರಿಬ್ಬರು ಚಿನ್ನ ಖರೀಸಿಸುವ ನೆಪದಲ್ಲಿ ನೆಕ್ಲೆಸ್ ಅನ್ನು ಎಗರಿಸಿದ್ದಾರೆ‌. ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಮಾತನಾಡುತ್ತಿದ್ದರು. ಈ ಖದೀಮರು 28.799 ಗ್ರಾಂ ತೂಕದ 1,49,000 ರೂ‌. ಮೌಲ್ಯದ ನೆಕ್ಲೆಸ್ ಅನ್ನು ಎಗರಿಸಿದ್ದಾರೆ.

ಜೂ.9ರಂದು ಸಿಸಿ ಕ್ಯಾಮರಾವನ್ನು ಪರಿಶೀಲನೆ ನಡೆಸಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article