-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಚಿಕನ್ ಸುಡುವ ಬರ್ನರ್ ನಲ್ಲಿ ಸುಟ್ಟುಹಾಕಿದ ಪತ್ನಿ: 8 ತಿಂಗಳ ಬಳಿಕ ಕೃತ್ಯ ಬಯಲು

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಚಿಕನ್ ಸುಡುವ ಬರ್ನರ್ ನಲ್ಲಿ ಸುಟ್ಟುಹಾಕಿದ ಪತ್ನಿ: 8 ತಿಂಗಳ ಬಳಿಕ ಕೃತ್ಯ ಬಯಲು

ಚಿಕ್ಕಬಳ್ಳಾಪುರ: ಪತಿ ಆತ್ಮಹತ್ಯೆ ಮಾಡಿದ್ದಾನೆಂದು ದೂರು ನೀಡಿರುವ ಪತ್ನಿಯೇ ಹಂತಕಿ ಎಂಬ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ‌. ಇದೀಗ ಪತ್ನಿ ಮತ್ತು ಆಕೆಯ ಪ್ರಿಯಕರ ಪೊಲೀಸ್ ಅತಿಥಿಗಳಾಗಿದ್ದಾರೆ.

ಈ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಜಿಗುಂಟೆ ಗ್ರಾಮದ ಮೆಹರ್ ಮತ್ತು ಆಕೆಯ ಪ್ರಿಯಕರ ತೌಸಿಫ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮೆಹರ್ ಪತಿಯನ್ನು ಚಿಕನ್ ಸುಡುವ ಬರ್ನರ್ ನಲ್ಲಿ ಸುಟ್ಟುಹಾಕಿ ಕೊಲೆಗೈದಿದ್ದಳು. ಆ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರಿಗೆ ದೂರು ನೀಡಿದ್ದಳು. ಇದೀಗ 8 ತಿಂಗಳ ಬಳಿಕ ಪೊಲೀಸರು ಆರೋಪಿ ಮೆಹರ್ ತನ್ನ ಪ್ರಿಯಕರ ತೌಸಿಫ್ ನೊಂದಿಗೆ ಸೇರಿ ಪತಿ ದಾದಾಪೀರ್​ನನ್ನು ಕೊಲೆ ಮಾಡಿರುವುದಾಗಿ ತನಿಖೆಯಿಂದ ಬಯಲಿಗಳೆದಿದ್ದಾರೆ. 

ಆರೋಪಿ ಮೆಹರ್ ತನ್ನ ಪತಿ ದಾದಾಪೀರ್ ಗೆ ನಿದ್ರೆ ಮಾತ್ರೆ ನೀಡಿ ಪ್ರಜ್ಞೆ ತಪ್ಪಿಸಿದ್ದಾಳೆ. ಬಳಿಕ ಚಿಕನ್ ಸುಡುವ ಗ್ಯಾಸ್ ಗನ್ ನಿಂದ ಸುಟ್ಟು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಈ ಬಗ್ಗೆ ಮೃತ ದಾದಾಪೀರ್ ನ ಸಹೋದರಿ ರೇಷ್ಮಾ ತಾಜ್ ತನ್ನ ಸಹೋದರನ ಸಾವು ಕೊಲೆ ಆಗಿರಬಹುದು ಎಂದು ಶಂಕಿಸಿ ಪೊಲೀಸ್ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಮೆಹರ್ ಹಾಗೂ ತೌಸಿಫ್​ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ