-->

ಹೊಸೂರು: ಲಾರಿ ಚಾಲಕನ ಅಜಾಗರೂಕತೆಯಿಂದ ದ್ವಿಚಕ್ರದಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮೃತ್ಯು, ಹಸುಗೂಸು ಪಾರು‌

ಹೊಸೂರು: ಲಾರಿ ಚಾಲಕನ ಅಜಾಗರೂಕತೆಯಿಂದ ದ್ವಿಚಕ್ರದಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮೃತ್ಯು, ಹಸುಗೂಸು ಪಾರು‌

ಹೊಸೂರು: ದ್ವಿಚಕ್ರ ವಾಹನಕ್ಕೆ ಲಾರಿಡಿಕ್ಕಿಯಾಗಿ ದಂಪತಿ ಮೃತಪಟ್ಟು ನಾಲ್ಕು ತಿಂಗಳ ಹಸುಗೂಸೊಂದು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾದ  ಘಟನೆ ರಾಜ್ಯದ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. 

ಅನ್ಬು ಹಾಗೂ ಸರಿತಾ ಅಪಘಾತದಲ್ಲಿ ಮೃತಪಟ್ಟ ದಂಪತಿ. 

ಹೆದ್ದಾರಿಯಲ್ಲಿ ಏಕಾಏಕಿ ಯುಟರ್ನ್ ತೆಗೆದುಕೊಳ್ಳಲು ಮುಂದಾದ ಟ್ಯಾಂಕರ್​ ಚಾಲಕ ದ್ವಿಚಕ್ರ ವಾಹನ ಬರುತ್ತಿರುವುದನ್ನೂ ಲೆಕ್ಕಿಸದೆ ಡಿಕ್ಕಿ ಹೊಡೆದ ಪರಿಣಾಮ ಈ ಅನಾಹುತ ಸಂಭವಿಸಿದೆ. ಆದ್ದರಿಂದ ಲಾರಿ ಚಾಲಕನ ಅಜಾಗರೂಕತೆಯಿಂದಾಗಿ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

4 ತಿಂಗಳ ಹಸುಗೂಸಿಕೊಂದಿಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮೃತಪಟ್ಟಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ads on article

Advertise in articles 1

advertising articles 2

Advertise under the article