-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಡಿಕೇರಿ: ಕತ್ತಲೆಕಾಡು ತಿರುವಿನಲ್ಲಿ ಸ್ಕೂಲ್ ವ್ಯಾನ್ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು; ಸಹಸವಾರ ಗಂಭೀರ ಗಾಯ

ಮಡಿಕೇರಿ: ಕತ್ತಲೆಕಾಡು ತಿರುವಿನಲ್ಲಿ ಸ್ಕೂಲ್ ವ್ಯಾನ್ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು; ಸಹಸವಾರ ಗಂಭೀರ ಗಾಯ

ಮಡಿಕೇರಿ: ಇಲ್ಲಿನ ಚಿಟ್ಟಳ್ಳಿ ಸಮೀಪದ ತಿರುವಿನಲ್ಲಿ ಸ್ಕೂಲ್ ವ್ಯಾನ್ ಹಾಗೂ ಬೈಕ್ ನಡುವೆ ಸಂಭವಿಸಿರುವ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಕೂಲಿ ಕಾರ್ಮಿಕ, ಮಕ್ಕಂದೂರು ನಿವಾಸಿ ಲಿತೀಶ್ ಪೂಜಾರಿ(22) ಮೃತಪಟ್ಟ ಯುವಕ. ಮೂರನೇ ಮೈಲ್ ನಿವಾಸಿ ಬಿ.ಎನ್.ಕೋಟಿ(60) ಗಾಯಗೊಂಡ ವ್ಯಕ್ತಿ. ಇವರಿಬ್ಬರೂ ಕೂಲಿ ಕೆಲಸಕ್ಕೆಂದು ಬೈಕ್ ನಲ್ಲಿ ಸಿದ್ದಾಪುರಕ್ಕೆ ತೆರಳುತ್ತಿದ್ದರು‌‌‌. ಈ ವೇಳೆ ಇವರ ಬೈಕ್ ಗೆ ಚಿಟ್ಟಳ್ಳಿ ಕಾಫಿ ಸಂಶೋಧನಾ ಕೇಂದ್ರದ ಶಾಲಾ ವ್ಯಾನ್ ಢಿಕ್ಕಿ ಹೊಡೆದಿದೆ. 

ಪರಿಣಾಮ ಲಿತೀಶ್ ಪೂಜಾರಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಬಿ.ಎನ್.ಕೋಟಿಯವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಚಿಟ್ಟಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ