-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಂಗಳೂರು: ಬಿಬಿಎಂಪಿ ತ್ಯಾಜ್ಯ ಲಾರಿಯ ವೇಗಕ್ಕೆ ಬಿದ್ದಂತಿಲ್ಲ ಕಡಿವಾಣ; ಪತ್ನಿ ಸಾವು, ಪತಿ ಗಂಭೀರ

ಬೆಂಗಳೂರು: ಬಿಬಿಎಂಪಿ ತ್ಯಾಜ್ಯ ಲಾರಿಯ ವೇಗಕ್ಕೆ ಬಿದ್ದಂತಿಲ್ಲ ಕಡಿವಾಣ; ಪತ್ನಿ ಸಾವು, ಪತಿ ಗಂಭೀರ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗಳ ಅಪಘಾತಕ್ಕೆ ಕಡಿವಾಣ ಬೀಳುವಂತೆ ಕಾಣುತ್ತಿಲ್ಲ‌. ಶನಿವಾರ ಮತ್ತೊಂದು ಜೀವವನ್ನು ಕಸದ ಲಾರಿ ಬಲಿ ಪಡೆದಿದೆ. ನಾಗರಬಾವಿ ಬಳಿ ಅತ್ಯಂತ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಆಗಮಿಸಿದ ತ್ಯಾಜ್ಯ ಲಾರಿ ಬೈಕ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿ ಸವಾರೆ ಪತ್ನಿ ಮೃತಪಟ್ಟರೆ, ಬೈಕ್ ಸವಾರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೈಸೂರು ರಸ್ತೆ ಕಸ್ತೂರ್ಬಾ ನಗರದ ನಿವಾಸಿ ವಿಜಯಕಲಾ(37) ಮೃತಪಟ್ಟ ಮಹಿಳೆ. ಇವರ ಪತಿ ಯೋಗೀಂದ್ರ(41) ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಚಾಲಕನನ್ನು ಬಂಧಿಸಲಾಗಿದೆ.

ನಾಗರಬಾವಿ ರಿಂಗ್ ರೋಡ್ ಸರ್ವೀಸ್ ರಸ್ತೆಯಲ್ಲಿ ಬೆಳಗ್ಗೆ 9.30 ವೇಳೆಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಲಾರಿ ಚಲಾಯಿಸಿ ಆಕೆ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ಯಿತ್ತಾದರೂ, ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಕೆಯ ಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಬ್ಯಾಟರಾಯನ ಪುರದಲ್ಲಿ ಪ್ರಕರಣ ದಾಖಲಾಗಿದೆ.  

Ads on article

Advertise in articles 1

advertising articles 2

Advertise under the article

ಸುರ