-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪುತ್ತೂರು: ಗೋದಾಮಿನಿಂದ ಕಾಳುಮೆಣಸು ಕಳವುಗೈದ ನಾಲ್ವರು ಅರೆಸ್ಟ್

ಪುತ್ತೂರು: ಗೋದಾಮಿನಿಂದ ಕಾಳುಮೆಣಸು ಕಳವುಗೈದ ನಾಲ್ವರು ಅರೆಸ್ಟ್

ಮಂಗಳೂರು: ಇಲ್ಲಿನ ಕೊಳ್ತಿಗೆ ಗ್ರಾಮದ ಕುದ್ಕೊಳಿ ಎಂಬಲ್ಲಿನ ತೋಟದ ಗೋದಾಮಿನಿಂದ ಕಾಳುಮೆಣಸು ಎಗರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಖದೀಮ ಕಳ್ಳರನ್ನು ಬಂಧಿಸಿರುವ ಪೊಲೀಸರು ಕಾಳುಮೆಣಸು ಹಾಗೂ ಕಾರೊಂದನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮ ನಿವಾಸಿ ಮಂಜು, ಕೊಡಿಯಬೈಲು‌ ನಿವಾಸಿ ಪ್ರವೀಣ್, ಬರ್ಪೆಡ್ಕ ನಿವಾಸಿ ಪವನ್ ಕುಮಾರ್ ಹಾಗೂ ಅಬ್ದುಲ್ ಬಾಸಿತ್ ಬಂಧಿತ ಆರೋಪಿಗಳು. 

ಆರೋಪಿಗಳು ಕುದ್ಕುಳಿ ನಿವಾಸಿ ಮಹಮ್ಮದ್ ಶಾಫಿ ಎಂಬವರ ತೋಟದ ಮನೆಯ ಗೋದಾಮಿನಲ್ಲಿದ್ದ 1,18,750 ರೂ. ಮೌಲ್ಯದ ಕಾಳುಮೆಣಸನ್ನು ಕಳವುಗೈದಿದ್ದರು. ಬಂಧಿತರಿಂದ ಕಳವುಗೈದಿರುವ ಕಾಳು ಮೆಣಸು ಹಾಗೂ ಕಳವುಗೈಯಲು ಬಳಸಿರುವ ಕಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ