-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕುಂದಾಪುರ: ಮರವಂತೆ ಬೀಚ್ ನಲ್ಲಿ ಸಮುದ್ರಪಾಲಾದ ಯುವಕನ ಮೃತದೇಹ ಪತ್ತೆ

ಕುಂದಾಪುರ: ಮರವಂತೆ ಬೀಚ್ ನಲ್ಲಿ ಸಮುದ್ರಪಾಲಾದ ಯುವಕನ ಮೃತದೇಹ ಪತ್ತೆ

ಕುಂದಾಪುರ: ಕಾರು ಪಲ್ಟಿಯಾಗಿ ಮರವಂತೆ ಸಮುದ್ರದಲ್ಲಿ ಮುಳುಗಿದ ಸಂದರ್ಭದಲ್ಲಿ ನಾಪತ್ತೆಯಾಗಿರುವ ಯುವಕ ರೋಶನ್ ಆಚಾರ್ಯ(24)ನ ಮೃತದೇಹ ಕಂಚಿಗೋಡು ತ್ರಾಸಿಯಲ್ಲಿ ಪತ್ತೆಯಾಗಿದೆ.

ರವಿವಾರ ಇವರಿದ್ದ ಕಾರು ಹೆದ್ದಾರಿಯಲ್ಲಿ ಪಲ್ಟಿಯಾಗಿ ಮರವಂತೆಯಲ್ಲಿ ಸಮುದ್ರಕ್ಕೆ ಬಿದ್ದಿತ್ತು. ಪರಿಣಾಮ ಕಾರು ಚಲಾಯಿಸುತ್ತಿದ್ದ ಬೀಜಾಡಿ ನಿವಾಸಿ ವಿರಾಜ್ ಆಚಾರ್ಯ ಮೃತಪಟ್ಟಿದ್ದರು. ಉಳಿದ ಇಬ್ಬರು ಪಾರಾಗಿದ್ದರು‌. ಆದರೆ ರೋಶನ್ ಆಚಾರ್ಯ ಸಮುದ್ರದಲ್ಲಿ ನಾಪತ್ತೆಯಾಗಿದ್ದರು. ಆದರೆ ಇಂದು ಅವರು ಮೃತದೇಹವಾಗಿ ಪತ್ತೆಯಾಗಿದ್ದಾರೆ‌.

ಅಪಘಾತದ ಸಂದರ್ಭ ರೋಶನ್ ಆಚಾರ್ಯ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿದ್ದರು. ರವಿವಾರ ಬೆಳಗ್ಗಿನಿಂದ ಅವರಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಆದರೆ ಅವರು ಎಲ್ಲೂ ಪತ್ತೆಯಾಗದ ಕಾರಣ ರಾತ್ರಿ ವೇಳೆ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿತ್ತು. ಇಂದು ಶೋಧ ಕಾರ್ಯ ಮುಂದುವರಿಸಲಾಗಿತ್ತು. ಆದರೆ ಇಂದು ಅವರು ಮೃತದೇಹವಾಗಿ ಕಂಚುಗೋಡು ತ್ರಾಸಿಯಲ್ಲಿ ಪತ್ತೆಯಾಗಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article