-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿಜಯಪುರ: ಕಟ್ಟಿಗೆ ತರಲೆಂದು ಹೋದ ತಾಯಿ - ಮಕ್ಕಳ ಮೃತದೇಹ ಬಾವಿಯಲ್ಲಿ ಪತ್ತೆ

ವಿಜಯಪುರ: ಕಟ್ಟಿಗೆ ತರಲೆಂದು ಹೋದ ತಾಯಿ - ಮಕ್ಕಳ ಮೃತದೇಹ ಬಾವಿಯಲ್ಲಿ ಪತ್ತೆ

ವಿಜಯಪುರ: ಬಾವಿಗೆ ಬಿದ್ದು, ತಾಯಿ - ಮಕ್ಕಳಿಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಝಳಕಿಯಲ್ಲಿ ನಡೆದಿದೆ.

ಝಳಕಿ ನಿವಾಸಿ ಶ್ರೀದೇವಿ ಸಂತೋಷ ಬಿರಾದರ್(31), ಆಕೆಯ ಮಕ್ಕಳಾದ ಶ್ರೀಶೈಲ(7) ಹಾಗೂ ಮಹೇಶ(5) ಮೃತಪಟ್ಟ ದುರ್ದೈವಿಗಳು. 

ತಾಯಿ ಹಾಗೂ ಮಕ್ಕಳಿಬ್ಬರು ಝಳಕಿ ಸಮೀಪದ ಶಿರನಾಳನಲ್ಲಿನ ತೋಟಕ್ಕೆ ಕಟ್ಟಿಗೆ ತರಲೆಂದು ತೋಟಕ್ಕೆ ಹೋಗಿದ್ದರು. ಆದರೆ ಅವರ ಮೃತದೇಹವು ಬಾವಿಯೊಂದರಲ್ಲಿ ಪತ್ತೆಯಾಗಿದೆ. ಅವರು ಕಾಲುಜಾರಿ ಬಿದ್ದಿದ್ದಾರೋ, ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ತಿಳಿದು ಬಂದಿಲ್ಲ. ಝಳಕಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ