-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಲಾಯಿಬೆಟ್ಟು: ಈಜಲು ಕಲ್ಲು ಕೋರೆಗಿಳಿದ ಯುವಕ ಮೃತ್ಯು!

ಉಲಾಯಿಬೆಟ್ಟು: ಈಜಲು ಕಲ್ಲು ಕೋರೆಗಿಳಿದ ಯುವಕ ಮೃತ್ಯು!

ಮಂಗಳೂರು: ಈಜಲು ತೆರಳಿರುವ ಯುವಕನೋರ್ವನು ಕಲ್ಲುಕೋರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಮಲ್ಲೂರು ಸಮೀಪದ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ನಡೆದಿದೆ.

ಜೋಕಟ್ಟೆ ನಿವಾಸಿ ಮುಹಮ್ಮದ್ ಶಿಯಾಝ್ (21) ಮೃತಪಟ್ಟ ದುರ್ದೈವಿ ಯುವಕ.

ರವಿವಾರ ಬೆಳಗ್ಗೆ ಶಿಯಾಝ್ ಉಳಾಯಿಬೆಟ್ಟುವಿನ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ 5:30ಕ್ಕೆ ಉಲಾಯಿಬೆಟ್ಟು ಕಾಯರಪದವು ಎಂಬಲ್ಲಿ ಶಿಯಾಬ್ ತಮ್ಮ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡಿದ್ದರು. ಬಳಿಕ ಆಟದ ಮೈದಾನದ ಬಳಿಯೇ ಇದ್ದ ಕೆಂಪು ಕಲ್ಲಿನ ಕ್ವಾರೆಗೆ ಈಜಲು ಹೋಗಿದ್ದರು.  

ಆದರೆ ಕೋರೆಯ ಆಳ ತಿಳಿಯದೆ ಈಜಲು ಇಳಿದ ಅವರು ಕೋರೆಯಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ