-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತವಾಗಿ ಯುವ ಇಂಜಿನಿಯರ್ ಸಾವು

ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತವಾಗಿ ಯುವ ಇಂಜಿನಿಯರ್ ಸಾವು

ಧಾರವಾಡ: ಕಾರು ಚಲಾಯಿಸುತ್ತಿರುವಾಗಲೇ ಯುವ ಇಂಜಿನಿಯರ್ ಓರ್ವರು ಹೃದಯಾಘಾತವಾಗಿ ಮೃತಪಟ್ಟ ದುರ್ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕರ್ಲವಾಡದಲ್ಲಿ ನಡೆದಿದೆ.

ಧಾರವಾಡ ಜಿಪಂ ಇಂಜಿನಿಯರ್, ನವಲಗುಂದ ತಾಲೂಕಿನ ಲೋಕನಾಥ ಗುತ್ತಲ್(29) ಮೃತಪಟ್ಟ ದುರ್ದೈವಿ. 

ಲೋಕನಾಥ ಗುತ್ತಲ್ ಅವರು ಹುಬ್ಬಳ್ಳಿಯಿಂದ ನವಲಗುಂದ ತಾಲೂಕಿಗೆ ಕರ್ತವ್ಯದ ಮೇಲೆ ತೆರಳಿದ್ದರು. ಆದರೆ ದಾರಿಮಧ್ಯೆ ಇವರಿಗೆ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿಯೇ
ಹೃದಯಾಘಾತಗೊಂಡಿದೆ‌. ಪರಿಣಾಮ ಇವರ ಕಾರು ತೋಟಕ್ಕೆ ನುಗ್ಗಿ ನಿಂತಿದೆ. ಲೋಕನಾಥ ಗುತ್ತಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ