-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Kaaniyooru:-ಕಾರು ನದಿಗೆ ಪಲ್ಟಿಯಾಗಿ ನಾಪತ್ತೆಯಾದವರ ಮೃತದೇಹಗಳು ಪತ್ತೆ..

Kaaniyooru:-ಕಾರು ನದಿಗೆ ಪಲ್ಟಿಯಾಗಿ ನಾಪತ್ತೆಯಾದವರ ಮೃತದೇಹಗಳು ಪತ್ತೆ..

ಕಾಣಿಯೂರು 

ಬೈತಡ್ಕದಲ್ಲಿ ಸೇತುವೆಗೆ ಡಿಕ್ಕಿ ಹೊಡೆದು ಕಾರು ಹೊಳೆಗೆ ಉರುಳಿಬಿದ್ದ ಪ್ರಕರಣಕ್ಕೆ ಸಂಭಂಧಿಸಿದಂತೆ ನಾಪತ್ತೆಯಾದವರಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ.

ಕಾರು ಬಿದ್ದ ಜಾಗದಿಂದ ಕೆಳಗಡೆ ಸುಮಾರು 250ಮೀ ದೂರದಲ್ಲಿ  ಎರಡು ಮೃತದೇಹಗಳು ಪತ್ತೆಯಾಗಿದೆ. ಸ್ಥಳೀಯರು ಮೊದಲು ಒಂದು ಮೃತದೇಹ ನೋಡಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೈತಡ್ಕ ಸೇತುವೆಯಿಂದ 250 ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯ ಎಂಬವರ ಮನೆಯ ಬಳಿ ಹೊಳೆಯಲ್ಲಿ ಮೃತದೇಹ ಒಂದು ಮೃತದೇಹ ಪತ್ತೆಯಾಗಿತ್ತು. ನಂತರದಲ್ಲಿ ಸ್ವಲ್ಪ ಕೆಳಗಡೆ ಎರಡನೇ ಮೃತದೇಹ ಪತ್ತೆಯಾಗಿದೆ.

ಜುಲೈ 10 ರಂದು 00.30 ರ ಸುಮಾರಿಗೆ ಬೈತಡ್ಕ ಮಸೀದಿ ಬಳಿ ಮಾರುತಿ 800 ಕಾರು ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದಿತ್ತು. ಮೃತದೇಹಗಳನ್ನು ಕಾರು ಚಾಲಕ ಧನಂಜಯ ಯಾನೆ ಧನು (26 ವರ್ಷ), ಸಹ ಪ್ರಯಾಣಿಕ ಧನುಷ್(21 ವರ್ಷ) ಎಂದು ಗುರುತಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ