-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತನ್ನನ್ನು ವಿವಾಹವಾಗದ ಸೇಡು: ಯುವತಿಯ ರುಂಡವನ್ನೇ ಕಡಿದ ಪಾಗಲ್ ಪ್ರೇಮಿ!

ತನ್ನನ್ನು ವಿವಾಹವಾಗದ ಸೇಡು: ಯುವತಿಯ ರುಂಡವನ್ನೇ ಕಡಿದ ಪಾಗಲ್ ಪ್ರೇಮಿ!

ವಿಜಯನಗರ: ತಾನು ಪ್ರೀತಿಸಿರುವ ಯುವತಿ ತನ್ನನ್ನು ವಿವಾಹಗಲಿಲ್ಲವೆಂದು ಪಾಗಲ್ ಪ್ರೇಮಿಯೋರ್ವನು ಕೋಪದಿಂದ ಆಕೆಯ ರುಂಡವನ್ನು ಕಡಿದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಭಯಾನಕ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ನಡೆದಿದೆ.

ನಿರ್ಮಲಾ( 23 ) ಭೀಕರವಾಗಿ ಹತ್ಯೆಯಾದ ಯುವತಿ.‌ ಭೋಜರಾಜ ಎಂಬ ಪಾಗಲ್ ಪ್ರೇಮಿ ಈ ಭಯಾನಕ ಕೃತ್ಯ ಎಸಗಿದ್ದಾನೆ . 

ಆರೋಪಿ ಭೋಜರಾಜ ಎಂಬಾತ ನಿರ್ಮಲಾ ಎಂಬ ಈ ಯುವತಿಯನ್ನು ಪ್ರೀತಿಸುತ್ತಿದ್ದ. ನಿರ್ಮಲಾ ಗ್ರೂಪ್ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ನಿರ್ಮಲಾಳನ್ನು ತನಗೆ ವಿವಾಹ ಮಾಡಿಕೊಂಡುವಂತೆ ಈ ಮೊದಲು ಆಕೆಯ ಪಾಲಕರಲ್ಲಿ ಈತ ಕೇಳಿದ್ದ. ಆದರೆ ಆಕೆಯ ಮನೆಯವರು ಒಪ್ಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತ ಬೇರೊಬ್ಬಳನ್ನು ಎರಡು ತಿಂಗಳ ಹಿಂದೆ ಮದುವೆಯಾಗಿದ್ದ.

ಆದರೆ ಭೋಜರಾಜ, ನಿರ್ಮಲಾ ತನ್ನನ್ನು ವಿವಾಹವಾಗಿಲ್ಲವೆಂದು ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ.  ಬೇರೊಂದು ನಗರದಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ, ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು. ಇದೇ ಸಂದರ್ಭಕ್ಕೆ ಕಾಯುತ್ತಿದ್ದ ಈ ಪಾಗಲ್ ಪ್ರೇಮಿ ಭೂಜರಾಜ ಆಕೆಯ ರುಂಡವನ್ನು ಮಚ್ಚಿನಿಂದ ಕಡಿದು ರುಂಡದೊಂದಿಗೆ ಠಾಣೆಗೆ ಶರಣಾಗಿದ್ದಾನೆ.

ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಠಾಣೆಗೆ ಯುವತಿಯ ರುಂಡದೊಂದಿಗೆ ಬಂದಿದ್ದಾನೆ. ಸ್ಥಳಕ್ಕೆ ಹಿರಿಯ ಪೊಲೀಸ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ