-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Nelyadi:- ಗುಂಡ್ಯ ಸಮೀಪ ನದಿಯಲ್ಲಿ ಆನೆಮರಿ ಶವ ಪತ್ತೆ..

Nelyadi:- ಗುಂಡ್ಯ ಸಮೀಪ ನದಿಯಲ್ಲಿ ಆನೆಮರಿ ಶವ ಪತ್ತೆ..

ನೆಲ್ಯಾಡಿ

ಶಿರಾಡಿ ಗ್ರಾಮದ ಗುಂಡ್ಯ ಸಮೀಪ, ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದಿಂದ ತುಸು ದೂರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವವೊಂದು ಜು.೮ರಂದು ಪತ್ತೆಯಾಗಿದೆ.

ಸಕಲೇಶಪುರ ವಲಯ ಅರಣ್ಯ ಅರಣ್ಯ ವ್ಯಾಪ್ತಿಯ ಮಾರನಹಳ್ಳಿ ಶಾಖೆ ಕೆಂಪುಹೊಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಆನೆಮರಿ ಶವ ಪತ್ತೆಯಾಗಿದೆ. ಆನೆ ಮರಿಗೆ ಸುಮಾರು ೫ ತಿಂಗಳು ಆಗಿರಬಹುದೆಂದು ಹೇಳಲಾಗಿದೆ. ತಾಯಿ ಆನೆಯೊಂದಿಗೆ ಮರಿ ಆನೆ ಆಹಾರ ಹುಡುಕುತ್ತಾ ಬರುವ ವೇಳೆ ಗುಡ್ಡದಿಂದ ಜಾರಿ ಬಿದ್ದಿರಬಹುದು ಅಥವಾ ಹೊಳೆ ದಾಟುವಾಗ ನೀರಿನೊಂದಿಗೆ ಕೊಚ್ಚಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮಾರನಹಳ್ಳಿ ಉಪವಲಯ ಅರಣ್ಯ ಅಧಿಕಾರಿ ಮಂಜುನಾಥ್, ಉಪ್ಪಿನಂಗಡಿ ಅರಣ್ಯ ವಲಯ ವ್ಯಾಪ್ತಿಯ ಶಿರಾಡಿ ಅರಣ್ಯಾಧಿಕಾರಿ ಧೀರಜ್, ಅರಣ್ಯ ರಕ್ಷಕ ಸುನಿಲ್‌ರವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ