-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಂಗಳೂರು: ಭಾರೀ ಜನಾಕ್ರೋಶಕ್ಕೆ ಮಣಿದ ರಾಜ್ಯ ಸರಕಾರ ಸರಕಾರಿ ಕಚೇರಿ ಫೋಟೋ, ವೀಡಿಯೋ ಶೂಟಿಂಗ್ ಆದೇಶ ವಾಪಸ್!

ಬೆಂಗಳೂರು: ಭಾರೀ ಜನಾಕ್ರೋಶಕ್ಕೆ ಮಣಿದ ರಾಜ್ಯ ಸರಕಾರ ಸರಕಾರಿ ಕಚೇರಿ ಫೋಟೋ, ವೀಡಿಯೋ ಶೂಟಿಂಗ್ ಆದೇಶ ವಾಪಸ್!

ಬೆಂಗಳೂರು : ಭಾರೀ ಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಕೆಲಸದ ವೇಳೆ ಖಾಸಗಿ ವ್ಯಕ್ತಿಗಳು ಫೋಟೋ ವೀಡಿಯೋ ತೆಗೆಯಬಾರದೆಂಬ ಆದೇಶವನ್ನು ತಡರಾತ್ರಿಯಿಂದಲೇ ವಾಪಸ್ ಪಡೆದುಕೊಂಡಿದೆ.


ಜುಲೈ 15ರಂದು ರಾಜ್ಯ ಸರ್ಕಾರದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯು ( ಡಿಪಿಎಆರ್ ) ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಕೆಲಸದ ವೇಳೆ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯುವುದನ್ನು ಮತ್ತು ವೀಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಸರ್ಕಾರದ ಈ ಆದೇಶ ಪ್ರತಿಯು ಎಲ್ಲಾ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅಲ್ಲದೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತ್ತು. ಜೊತೆಗೆ ಸಾರ್ವಜನಿಕ ವಲಯದಲ್ಲಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು.

ಇದೀಗ ಜನಾಕ್ರೋಶವನ್ನು ಗಮನಿಸಿರುವ ಸರ್ಕಾರ ತಡರಾತ್ರಿಯೇ ಆದೇಶವನ್ನು ವಾಪಸ್ ಪಡೆದುಕೊಂಡಿದ್ದು , ಈ ಸಂಬಂಧ ಹೊಸ ಆದೇಶವನ್ನು ಹೊರಡಿಸಿದೆ.

Ads on article

Advertise in articles 1

advertising articles 2

Advertise under the article

ಸುರ